ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಕೆ.ಆರ್ ಪೇಟೆಯಲ್ಲಿ ವಿಧಾನಸಭೆಗೆ ಉಪ ಚುನಾವಣೆ ನಡೆಯಲಿದೆ. ಈ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮತ್ತೆ ಕಣಕ್ಕಿಳಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ದೇವೇಗೌಡರು ಈಗಾಗಲೇ ಈ ವಿಷಯವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.
ಸುಮಲತಾ ಅವರ ಬೆಂಬಲವಿದ್ದರೆ ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಕಷ್ಟವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಉತ್ತಮ ಲೀಡ್ ಬಂದಿತ್ತು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ದೇವೇಗೌಡರ ಮೊಮ್ಮಗ, ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಅವರನ್ನು ಸೋಲಿಸಿ ಭಾರೀ ಬಹುಮತದಿಂದ ಗೆದ್ದಿರುವ ಸುಮಲತಾ ಇದೀಗ ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…