Featured

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳ ಆಯೋಜನೆ

ಉಡುಪಿ: ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಶುಕ್ರವಾರ ಉಡುಪಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡುವ ಮೊದಲು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಂತ ಪವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸದ್ಮಗೊಳಿಸಲಿವೆ’ ‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ ಪುತಿ ಬೂತ್ಸಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಬಾರಿಯ ಗ್ರಾಮ ಪಂಚಾಯತ್‌‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಪೇಜ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಪಂಚರತ್ನ, ಪಂಚ ಸೂತ್ರದ ಎಂಬ ಹೊಸ ಕಲ್ಪನೆಯಲ್ಲಿ ಕೆಲಸ ಮಾಡುತ್ತೇವೆ. ಅಲ್ಲದೆ ಕಾಲ್ ಸೆಂಟರ್‌ ರಚನೆ, ಪ್ರತಿ ಮತಗಟ್ಟೆಗಳಲ್ಲಿ ಕುಟುಂಬ ಸಮ್ಮೇಳನ ನಡೆಸಲಾಗುತ್ತದೆ. ‌ಗ್ರಾಮ ಪಂಚಾಯತ್ ಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಆಗಬೇಕು. ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು. ಕಾರ್ಯಕರ್ತರು ನಾಯಕರಾಗಬಲ್ಲ ಕ್ಷೇತ್ರ ಗ್ರಾಮ ಪಂಚಾಯತ್. ಹಾಗಾಗಿ, ಈ ಬಾರಿ ಅತೀ ಹೆಚ್ಚು ಗ್ರಾಮ ಪಂಚಾಯತಿ ಬಿಜೆಪಿ ಪಡೆಯಲು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮಂಡನ್, ಸಂಸದರಾದ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರು ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೊರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪೂಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಕಾಲ್ ರಷ್ಯಾಕರ ಹೆಗ್ಯ ಹಾಗೂ ಇತರರು ಉಪಸ್ಮಿತರಿದ್ದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago