Featured

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ , ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು : ನಳಿನ್ ಕುಮಾರ್ ಕಟೀಲ್ -Vishwanews24

ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳ ಆಯೋಜನೆ

ಉಡುಪಿ: ಮುಂಬರುವ ಗ್ರಾಮಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 80% ಸ್ನಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಗೆಲುವಿನ ಕಾರ್ಯತಂತ್ರ ಹೆಣೆಯುವ ಸಲುವಾಗಿ ನ. 27 ರಿಂದ ಆರಂಭಿಸಿ ಡಿ 7 ರ ವರಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಶುಕ್ರವಾರ ಉಡುಪಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡುವ ಮೊದಲು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಜಿಲ್ಲೆಯ ಎರಡು ಕಡೆ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಚಿವರು, ಸಂಸದರು, ಶಾಸಕರು ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನೊಳಗೊಂಡ ಆರು ತಂಡ ರಚಿಸಲಾಗಿದೆ. ಈ ತಂಡಗಳು ರಾಜ್ಯದಾದ್ಯಂತ ಪವಾಸ ಮಾಡಿ, ಚುನಾವಣೆಗೆ ಕಾರ್ಯಕರ್ತರನ್ನು ಸದ್ಮಗೊಳಿಸಲಿವೆ’ ‘ಚುನಾವಣೆಗಾಗಿ ವಾರ್ ರೂಂಗಳ ರಚನೆ, ಕಾಲ್ ಸೆಂಟರ್ಗಳ ಕಾರ್ಯಾರಂಭ ಪುತಿ ಬೂತ್ಸಲ್ಲಿ ಐವರು ಕಾರ್ಯಕರ್ತರನ್ನೊಳಗೊಂಡ ಪಂಚರತ್ನ ತಂಡದ ರಚನ, ಪೇಜ್ ಪ್ರಮುಖರ ನಿಯುಕ್ತಿ ಹಾಗೂ ಕುಟುಂಬ ಮಿಲನ ಎಂಬ ಪಂಚಸೂತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಬಾರಿಯ ಗ್ರಾಮ ಪಂಚಾಯತ್‌‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಪೇಜ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಪಂಚರತ್ನ, ಪಂಚ ಸೂತ್ರದ ಎಂಬ ಹೊಸ ಕಲ್ಪನೆಯಲ್ಲಿ ಕೆಲಸ ಮಾಡುತ್ತೇವೆ. ಅಲ್ಲದೆ ಕಾಲ್ ಸೆಂಟರ್‌ ರಚನೆ, ಪ್ರತಿ ಮತಗಟ್ಟೆಗಳಲ್ಲಿ ಕುಟುಂಬ ಸಮ್ಮೇಳನ ನಡೆಸಲಾಗುತ್ತದೆ. ‌ಗ್ರಾಮ ಪಂಚಾಯತ್ ಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಆಗಬೇಕು. ಗಾಂಧೀಜಿಯ ಕನಸಿನಂತೆ ಗ್ರಾಮಗಳು ರಾಮರಾಜ್ಯವಾಗಬೇಕು. ಕಾರ್ಯಕರ್ತರು ನಾಯಕರಾಗಬಲ್ಲ ಕ್ಷೇತ್ರ ಗ್ರಾಮ ಪಂಚಾಯತ್. ಹಾಗಾಗಿ, ಈ ಬಾರಿ ಅತೀ ಹೆಚ್ಚು ಗ್ರಾಮ ಪಂಚಾಯತಿ ಬಿಜೆಪಿ ಪಡೆಯಲು ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ಉಡುಪಿ-ಚಿಕ್ಕಮಗಳೂರು ಸಂಸದ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮಂಡನ್, ಸಂಸದರಾದ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷರು ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೊರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪೂಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಕಾಲ್ ರಷ್ಯಾಕರ ಹೆಗ್ಯ ಹಾಗೂ ಇತರರು ಉಪಸ್ಮಿತರಿದ್ದರು.

 

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

37 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago