ಮಂಗಳೂರು : ”ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಜೊತೆ ನಿಂತು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ” ಎಂದು ಶಾಸಕ ಯು ಟಿ ಖಾದರ್ ಹೇಳಿದರು.
ಡಿಸೆಂಬರ್ 14 ರ ಸೋಮವಾರ ಇಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಯು ಟಿ ಖಾದರ್, ”ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಹಾಗಾಗಿ ಜನರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ” ಎಂದರು
”ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಪಡಿತರ ಚೀಟಿ ವಿತರಿಸಿಲ್ಲ. ಯಾವುದೇ ಮನೆಗಳನ್ನು ಮಂಜೂರು ಮಾಡಿಲ್ಲ. ಶಾಲೆ ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಗೊಂದಲ ಇನ್ನೂ ಇದೆ. ರೈತ ವಿರೋಧಿ ನೀತಿ ಸೇರಿದಂತೆ ಹಲವು ನೀತಿಗಳು ಜನರ ಮೇಲೆ ತೀವ್ರ ಪರಿಣಾಮ ಬೀರಿದೆ. ಜನರು ಬಿಜೆಪಿಗೆ ಮತ ನೀಡುವಂತ ಯಾವ ಕಾರ್ಯವನ್ನು ಬಿಜೆಪಿ ಮಾಡಿದೆ” ಎಂದು ಖಾದರ್ ಪ್ರಶ್ನಿಸಿದರು.
”ಸರ್ಕಾರದ ಯಾವುದೇ ಯೋಜನೆಗಳು ಜನರಿಗೆ ತಲುಪಿಲ್ಲ. ಹಾಗೆಯೇ ಸರ್ಕಾರ ಜನ ವಿರೋಧಿ ನೀತಿಗಳನ್ನು ಪರಿಚಯಿಸುತ್ತಿದ್ದಾರೆ. ಸರಕುಗಳು, ಪೆಟ್ರೋಲ್, ಡೀಸೆಲ್ ಮೇಲಿನ ಬೆಲೆ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ಜನರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ”ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಂಡಿದೆ. ಚುನಾವಣೆಗೆ ಮುನ್ನ ಮೀಸಲಾತಿ ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದಿದೆ. ವಾರ್ಡ್ಗಳನ್ನು ಅವೈಜ್ಞಾನಿಕವಾಗಿ ವಿಂಗಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ. ಗೆಲ್ಲೋದಕ್ಕಾಗಿ ಬಿಜೆಪಿ ವಾಮ ಮಾರ್ಗ ಅನುಸರಿಸುತ್ತಿದೆ” ಎಂದು ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜಾ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…