Featured

ಮುಂಬರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ರಾಜಕೀಯ ತೊರೆಯುತ್ತೇನೆ : ಏಕನಾಥ್ ಶಿಂಧೆ

ಮುಂಬರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ರಾಜಕೀಯ ತೊರೆಯುತ್ತೇನೆ : ಏಕನಾಥ್ ಶಿಂಧೆ

ಮುಂಬಯಿ: ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಶುಕ್ರವಾರ ತಮ್ಮ ಶಾಸಕರ ಗುಂಪು ಏಕನಾಥ್ ಶಿಂಧೆ ಅವರನ್ನು ಸನ್ಮಾನಿಸಲಾಯಿತು, ಈ ವೇಳೆ 50 ಶಾಸಕರು ತಮ್ಮನ್ನು ಬೆಂಬಲಿಸಲು ತೆಗೆದುಕೊಂಡ ರಿಸ್ಕ್ ಬಗ್ಗೆ ಮಾತನಾಡಿದರು. ಈ ಎಲ್ಲಾ ಶಾಸಕರ ಆಗು ಹೋಗುಗಳ ಬಗ್ಗೆ ಗಮನ ಹರಿಸುವುದು ತಮ್ಮ ಕರ್ತವ್ಯ , ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಸಮಯನೀಡುತ್ತೇನೆ.

ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50 ಶಾಸಕರು ಈಗ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಜನರು ಹೇಳುತ್ತಾರೆ. ಆದರೆ ಒಬ್ಬ ಶಾಸಕ ಚುನಾವಣೆಯಲ್ಲಿ ಸೋತರೂ, ನಾನು ಶಾಶ್ವತವಾಗಿ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.

ಆರಂಭದಲ್ಲಿ ಕೆಲವೇ ಶಾಸಕರು ನಮ್ಮೊಂದಿಗಿದ್ದರು, ನಂತರ 50 ಮಂದಿ ಇದ್ದರು. ನಮ್ಮ ವಿರುದ್ಧ ಇದ್ದವರು ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದರು. ಆದರೆ ಅವರ ಡರ್ಟಿ ಗೇಮ್ ಗೆ ಯಾರೋಬ್ಬರು ಬೆಂಬಲ ನೀಡಲಿಲ್ಲ. ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿರ್ಧಾರವನ್ನು ಜನರು ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

“ಸೂರತ್ ಮತ್ತು ಗುವಾಹಟಿಯಲ್ಲಿ ಇಷ್ಟು ದಿನ ನಿದ್ದೆ ಬರಲಿಲ್ಲ. ನಾನು 1.00 ಗಂಟೆಗೆ ಮಲಗಲು ಮತ್ತು ಬೆಳಗ್ಗೆ 3 ಗಂಟೆಗೆ ಎದ್ದೇಳುತ್ತಿದ್ದೆ. ಇದು ನನ್ನ ಜೀವನದಲ್ಲಿ ಒಂದು ಅತಿ ನಿರ್ಣಾಯಕ ಕ್ಷಣವಾಗಿತ್ತು. ನಾನು ನನ್ನ ಭವಿಷ್ಯದ ಬಗ್ಗೆ ಚಿಂತಿಸಲಿಲ್ಲ ಆದರೆ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ನನ್ನೊಂದಿಗೆ ಬಂದಿದ್ದ 50 ಶಾಸಕರ ಭವಿಷ್ಯದ ಬಗ್ಗೆ ನನಗೆ ಕಾಳಜಿ ಇತ್ತು. ಅವರು ನನ್ನ ನಾಯಕತ್ವದಲ್ಲಿ ವಿಶ್ವಾಸ ತೋರಿಸಿದರು ಎಂದು ಶಿಂಧೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇನಾ ಶಾಸಕರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ. ಎನ್ ಸಿಪಿ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ನಾನು ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಯಾರೋಬ್ಬರು ಸಮಸ್ಯೆ ನೀಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

14 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

14 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

14 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

14 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

15 hours ago