ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್ಗಳ ಆಡಿಯೋ ಬಾಂಬ್ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.
ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…