ಮಂಗಳೂರು : ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸುತ್ತದೆ. ಫಲಿತಾಂಶದ ದಿನ ಅಂದರೆ ನ. 14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.
ನ.8ರ ಶುಕ್ರವಾರದಂದು ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಜನಾರ್ದನ ಪೂಜಾರಿ, “ಕಾಂಗ್ರೆಸ್ ಪಕ್ಷ ಅತ್ಯುತ್ತಮವಾದುದು, ಆದರೆ ಅಲ್ಲಿನ ನಾಯಕರುಗಳಿಗೆ ಹೇಗೆ ಮಾತನಾಡಬೇಕೆನ್ನುವುದೇ ತಿಳಿದಿಲ್ಲ ಹೀಗಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಚುನಾವಣೆ ಗೆಲ್ಲುತ್ತದೆ ಮತ್ತು ನವೆಂಬರ್ 14 ನಿರ್ಣಾಯಕ ದಿನವಾದ್ದರಿಂದ ಕಾಂಗ್ರೆಸ್ ಅದರ ನೇರ ಪರಿಣಾಮಗಳನ್ನು ಎದುರಿಸಲಿದೆ ಎಂದರು.
ಸಿದ್ಧರಾಮಯ್ಯ ಆಡಳಿತ ಕಾಲದಲ್ಲಿ ಮಂಗಳೂರಿಗೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,”ಇದು ಸುಳ್ಳು ಎಂದು ಸಿದ್ದರಾಮಯ್ಯ ಸತ್ಯ ಮಾತನಾಡಿದ್ದಾರೆಯೇ?” ಆರೋಪಿಸಿದರು.
ಮದ್ಯದಂಗಡಿಗಳಿಗಿರುವ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಬಗ್ಗೆ ಕೇಳಿದಾಗ, ಬಿ ಜನಾರ್ಧನ ಪೂಜಾರಿ, “ಮದ್ಯದಂಗಡಿಗಾಗಿ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಸರಿಯಾದ ನಿರ್ಧಾರವಾಗಿದೆ” ಎಂದರು.
ಕಾಂಗ್ರೆಸ್ ಮುಖಂಡರಾದ ಕಲ್ಲಿಗೆ ತಾರನಾಥ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…