ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್ – Vishwanews24

Featured, ದಕ್ಷಿಣ ಕನ್ನಡ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ..

ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಬಂಟ್ವಾಳದ ತುಂಬೆಯಲ್ಲಿ ರವಿವಾರ ನಡೆದ ಜನಾಗ್ರಹ ಸಮಾವೇಶದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದೂ ಕಾರ್ಯಕರ್ತರು ನನ್ನ ಪರ ಸಮಾವೇಶವನ್ನು ಏರ್ಪಡಿಸಿ ನನ್ನನ್ನು ಕರೆದಿದ್ದರು. ಸಮಾವೇಶದಲ್ಲಿ ಭಾಗವಹಿಸಿ ನನಗೆ ಪಕ್ಷದಲ್ಲಿ ಸಿಕ್ಕಿರುವ ಸ್ಥಾನಮಾನದ ಬಗ್ಗೆ ಮನದಾಳದ ಮಾತನ್ನು ಹೇಳಿದ್ದೇನೆ. ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ಯಾವತ್ತೂ ಹೋಗುವುದಿಲ್ಲ. ಟಿಕೆಟ್ ಘೋಷಣೆಯಾಗುವ ತನಕ ಕಾರ್ಯಕರ್ತರೊಂದಿಗೆ ಹೋರಾಟ ನಡೆಸುತ್ತೇನೆ. ನನಗೆ ಟಿಕೆಟ್ ಸಿಗುವ ಪೂರ್ಣ ವಿಶ್ವಾಸ ಇದೆ. ನನ್ನ ತಂಡದ ಎಲ್ಲರಿಗೂ ವಿಶ್ವಾಸ ಇದೆ. ಅಕಸ್ಮಾತ್ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಪೇಕ್ಷೆಯಂತೆ ಮುಂದುವರಿಯುವುದಾಗಿ ಹೇಳಿದರು.

ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲಾದ ಬಾಲಕನ ಮೃತದೇಹ ಪತ್ತೆ – Vishwanews24

ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರನ್ನು ನಿಮ್ಮೊಂದಿಗೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಪುತ್ತಿಲರ ಬಗ್ಗೆ ಏನು ಹೇಳುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಏಕಾಂಗಿ ದುಡಿದಿದ್ದರು. ನನ್ನನ್ನು ಕರೆದಿರ ಲಿಲ್ಲ. ಅವರಿಗೆ ಈಗ ಏನು ಸಮಸ್ಯೆ ಇದೆ ಎನ್ನುವುದು ಗೊತ್ತಿಲ್ಲ. ನಾವು ಅವರನ್ನು ಮಾತನಾಡಿಸಲಿಕ್ಕೆ ಹೋಗಿಲ್ಲ. ಅವರಾಗಿ ನಮ್ಮೊಂದಿಗೆ ಬಂದರೆ ಸ್ವಾಗತಿಸುತ್ತೇವೆ ಎಂದರು.

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ. ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ ಎಂದು ಹೇಳಿದರು.

ಜ್ಞಾನವಾಪಿ ಮಸೀದಿ ಪ್ರಕರಣ : ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ; ಮುಸ್ಲಿಂ ಪರ ಅರ್ಜಿ ವಜಾ – Vishwanews24

 

Leave a Reply