Featured

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್ – Vishwanews24

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ..

ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಬಂಟ್ವಾಳದ ತುಂಬೆಯಲ್ಲಿ ರವಿವಾರ ನಡೆದ ಜನಾಗ್ರಹ ಸಮಾವೇಶದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದೂ ಕಾರ್ಯಕರ್ತರು ನನ್ನ ಪರ ಸಮಾವೇಶವನ್ನು ಏರ್ಪಡಿಸಿ ನನ್ನನ್ನು ಕರೆದಿದ್ದರು. ಸಮಾವೇಶದಲ್ಲಿ ಭಾಗವಹಿಸಿ ನನಗೆ ಪಕ್ಷದಲ್ಲಿ ಸಿಕ್ಕಿರುವ ಸ್ಥಾನಮಾನದ ಬಗ್ಗೆ ಮನದಾಳದ ಮಾತನ್ನು ಹೇಳಿದ್ದೇನೆ. ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ಯಾವತ್ತೂ ಹೋಗುವುದಿಲ್ಲ. ಟಿಕೆಟ್ ಘೋಷಣೆಯಾಗುವ ತನಕ ಕಾರ್ಯಕರ್ತರೊಂದಿಗೆ ಹೋರಾಟ ನಡೆಸುತ್ತೇನೆ. ನನಗೆ ಟಿಕೆಟ್ ಸಿಗುವ ಪೂರ್ಣ ವಿಶ್ವಾಸ ಇದೆ. ನನ್ನ ತಂಡದ ಎಲ್ಲರಿಗೂ ವಿಶ್ವಾಸ ಇದೆ. ಅಕಸ್ಮಾತ್ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಪೇಕ್ಷೆಯಂತೆ ಮುಂದುವರಿಯುವುದಾಗಿ ಹೇಳಿದರು.

ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರನ್ನು ನಿಮ್ಮೊಂದಿಗೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಪುತ್ತಿಲರ ಬಗ್ಗೆ ಏನು ಹೇಳುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಏಕಾಂಗಿ ದುಡಿದಿದ್ದರು. ನನ್ನನ್ನು ಕರೆದಿರ ಲಿಲ್ಲ. ಅವರಿಗೆ ಈಗ ಏನು ಸಮಸ್ಯೆ ಇದೆ ಎನ್ನುವುದು ಗೊತ್ತಿಲ್ಲ. ನಾವು ಅವರನ್ನು ಮಾತನಾಡಿಸಲಿಕ್ಕೆ ಹೋಗಿಲ್ಲ. ಅವರಾಗಿ ನಮ್ಮೊಂದಿಗೆ ಬಂದರೆ ಸ್ವಾಗತಿಸುತ್ತೇವೆ ಎಂದರು.

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ. ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ ಎಂದು ಹೇಳಿದರು.

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago