Featured

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್ – Vishwanews24

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ : ಸತ್ಯಜಿತ್ ಸುರತ್ಕಲ್

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ..

ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸ ಇದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಬಂಟ್ವಾಳದ ತುಂಬೆಯಲ್ಲಿ ರವಿವಾರ ನಡೆದ ಜನಾಗ್ರಹ ಸಮಾವೇಶದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದೂ ಕಾರ್ಯಕರ್ತರು ನನ್ನ ಪರ ಸಮಾವೇಶವನ್ನು ಏರ್ಪಡಿಸಿ ನನ್ನನ್ನು ಕರೆದಿದ್ದರು. ಸಮಾವೇಶದಲ್ಲಿ ಭಾಗವಹಿಸಿ ನನಗೆ ಪಕ್ಷದಲ್ಲಿ ಸಿಕ್ಕಿರುವ ಸ್ಥಾನಮಾನದ ಬಗ್ಗೆ ಮನದಾಳದ ಮಾತನ್ನು ಹೇಳಿದ್ದೇನೆ. ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ಯಾವತ್ತೂ ಹೋಗುವುದಿಲ್ಲ. ಟಿಕೆಟ್ ಘೋಷಣೆಯಾಗುವ ತನಕ ಕಾರ್ಯಕರ್ತರೊಂದಿಗೆ ಹೋರಾಟ ನಡೆಸುತ್ತೇನೆ. ನನಗೆ ಟಿಕೆಟ್ ಸಿಗುವ ಪೂರ್ಣ ವಿಶ್ವಾಸ ಇದೆ. ನನ್ನ ತಂಡದ ಎಲ್ಲರಿಗೂ ವಿಶ್ವಾಸ ಇದೆ. ಅಕಸ್ಮಾತ್ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಪೇಕ್ಷೆಯಂತೆ ಮುಂದುವರಿಯುವುದಾಗಿ ಹೇಳಿದರು.

ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರನ್ನು ನಿಮ್ಮೊಂದಿಗೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಪುತ್ತಿಲರ ಬಗ್ಗೆ ಏನು ಹೇಳುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಏಕಾಂಗಿ ದುಡಿದಿದ್ದರು. ನನ್ನನ್ನು ಕರೆದಿರ ಲಿಲ್ಲ. ಅವರಿಗೆ ಈಗ ಏನು ಸಮಸ್ಯೆ ಇದೆ ಎನ್ನುವುದು ಗೊತ್ತಿಲ್ಲ. ನಾವು ಅವರನ್ನು ಮಾತನಾಡಿಸಲಿಕ್ಕೆ ಹೋಗಿಲ್ಲ. ಅವರಾಗಿ ನಮ್ಮೊಂದಿಗೆ ಬಂದರೆ ಸ್ವಾಗತಿಸುತ್ತೇವೆ ಎಂದರು.

37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ. ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

5 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

10 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

16 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

22 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago