ಕಾರವಾರ : ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ‘ಮೆರ್ಸಿ ಟ್ರಾವೆಲ್ಸ್’ನ ಬಸ್ ಯಲ್ಲಾಪುರ ಪಟ್ಟಣದ ಜೋಡುಕೆರೆ ಮಾರುತಿ ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಯಾರಿಗೂ ಅಪಾಯವಾಗಿಲ್ಲ.
ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಈ ಅವಘಡ ಸಂಭವಿಸಿದೆ.
ಬಸ್ (KA 51-AD 5836) ಮುಂಬೈಯಿಂದ 28 ಪ್ರಯಾಣಿಕರೊಂದಿಗೆ ಮಂಗಳೂರಿಗೆ ತೆರಳುತ್ತಿತ್ತು. ಸ್ತ್ರೀಪಿಂಗ್ ಕೋಚ್ ಆಗಿರುವ ಈ ಬಸ್, ಪಟ್ಟಣದ ಮಾರುತಿ ದೇವಸ್ಥಾನದ ಎದುರಿನ ಘಟ್ಟದ ರಸ್ತೆ ಹತ್ತುತ್ತಿದ್ದಂತೆ, ಹಿಂಬದಿಯ ಟೈರ್ ಸ್ಫೋಟವಾಯಿತು. ಬ್ಯಾಟರಿ ಶಾರ್ಟ್ ಸರ್ಕೀಟ್ ಆಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.
ಟೈರ್ ಸ್ಫೋಟವಾದ ಬಳಿಕ ಬಸ್ ಸ್ವಲ್ಪ ದೂರ ಚಲಿಸಿದೆ. ಆಗ ಬೆಂಕಿ ಇಡೀ ಬಸ್ಗೆ ಆವರಿಸಿದೆ. ಕೂಡಲೇ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಲಾಯಿತು. ಸ್ಲೀಪಿಂಗ್ ಕೋಚ್ ಬಸ್ನಲ್ಲಿ ಬಹಳಷ್ಟು ಪ್ರಯಾಣಿಕರು ಗಾಢನಿದ್ದೆಯಲ್ಲಿದ್ದರು.
ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ಅವಘಡವನ್ನು ಗಮನಿಸಿ ಬಸ್ನ ಸಿಬ್ಬಂದಿಯನ್ನು ಎಚ್ಚರಿಸಿದರು. ಕೂಡಲೇ ಎಲ್ಲರನ್ನೂ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ಸ್ವಲ್ಪ ತಡವಾಗಿದ್ದರೂ ಭಾರಿ ಅನಾಹುತವಾಗುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ, ಅದಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬಸ್ನಲ್ಲಿದ್ದ ಪ್ರಯಾಣಿಕರನ್ನು ಅವರವರ ಊರಿಗೆ ಬೇರೆ ಬಸ್ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…