ಕಾರವಾರ : ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ‘ಮೆರ್ಸಿ ಟ್ರಾವೆಲ್ಸ್’ನ ಬಸ್ ಯಲ್ಲಾಪುರ ಪಟ್ಟಣದ ಜೋಡುಕೆರೆ ಮಾರುತಿ ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಯಾರಿಗೂ ಅಪಾಯವಾಗಿಲ್ಲ.
ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಈ ಅವಘಡ ಸಂಭವಿಸಿದೆ.
ಬಸ್ (KA 51-AD 5836) ಮುಂಬೈಯಿಂದ 28 ಪ್ರಯಾಣಿಕರೊಂದಿಗೆ ಮಂಗಳೂರಿಗೆ ತೆರಳುತ್ತಿತ್ತು. ಸ್ತ್ರೀಪಿಂಗ್ ಕೋಚ್ ಆಗಿರುವ ಈ ಬಸ್, ಪಟ್ಟಣದ ಮಾರುತಿ ದೇವಸ್ಥಾನದ ಎದುರಿನ ಘಟ್ಟದ ರಸ್ತೆ ಹತ್ತುತ್ತಿದ್ದಂತೆ, ಹಿಂಬದಿಯ ಟೈರ್ ಸ್ಫೋಟವಾಯಿತು. ಬ್ಯಾಟರಿ ಶಾರ್ಟ್ ಸರ್ಕೀಟ್ ಆಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.
ಟೈರ್ ಸ್ಫೋಟವಾದ ಬಳಿಕ ಬಸ್ ಸ್ವಲ್ಪ ದೂರ ಚಲಿಸಿದೆ. ಆಗ ಬೆಂಕಿ ಇಡೀ ಬಸ್ಗೆ ಆವರಿಸಿದೆ. ಕೂಡಲೇ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಲಾಯಿತು. ಸ್ಲೀಪಿಂಗ್ ಕೋಚ್ ಬಸ್ನಲ್ಲಿ ಬಹಳಷ್ಟು ಪ್ರಯಾಣಿಕರು ಗಾಢನಿದ್ದೆಯಲ್ಲಿದ್ದರು.
ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ಅವಘಡವನ್ನು ಗಮನಿಸಿ ಬಸ್ನ ಸಿಬ್ಬಂದಿಯನ್ನು ಎಚ್ಚರಿಸಿದರು. ಕೂಡಲೇ ಎಲ್ಲರನ್ನೂ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ಸ್ವಲ್ಪ ತಡವಾಗಿದ್ದರೂ ಭಾರಿ ಅನಾಹುತವಾಗುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ, ಅದಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬಸ್ನಲ್ಲಿದ್ದ ಪ್ರಯಾಣಿಕರನ್ನು ಅವರವರ ಊರಿಗೆ ಬೇರೆ ಬಸ್ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…