Featured

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ : 22 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – Vishwanews24

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ : 22 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – Vishwanews24

ಕಾರವಾರ :  ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ‘ಮೆರ್ಸಿ ಟ್ರಾವೆಲ್ಸ್’ನ ಬಸ್ ಯಲ್ಲಾಪುರ ಪಟ್ಟಣದ ಜೋಡುಕೆರೆ ಮಾರುತಿ ದೇವಸ್ಥಾನದ ಎದುರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಯಾರಿಗೂ ಅಪಾಯವಾಗಿಲ್ಲ.

ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಈ ಅವಘಡ ಸಂಭವಿಸಿದೆ.

ಬಸ್ (KA 51-AD 5836) ಮುಂಬೈಯಿಂದ 28 ಪ್ರಯಾಣಿಕರೊಂದಿಗೆ ಮಂಗಳೂರಿಗೆ ತೆರಳುತ್ತಿತ್ತು. ಸ್ತ್ರೀಪಿಂಗ್ ಕೋಚ್ ಆಗಿರುವ ಈ ಬಸ್, ಪಟ್ಟಣದ ಮಾರುತಿ ದೇವಸ್ಥಾನದ ಎದುರಿನ ಘಟ್ಟದ ರಸ್ತೆ ಹತ್ತುತ್ತಿದ್ದಂತೆ, ಹಿಂಬದಿಯ ಟೈರ್ ಸ್ಫೋಟವಾಯಿತು. ಬ್ಯಾಟರಿ ಶಾರ್ಟ್ ಸರ್ಕೀಟ್ ಆಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ಟೈರ್ ಸ್ಫೋಟವಾದ ಬಳಿಕ ಬಸ್ ಸ್ವಲ್ಪ ದೂರ ಚಲಿಸಿದೆ. ಆಗ ಬೆಂಕಿ ಇಡೀ ಬಸ್‌ಗೆ ಆವರಿಸಿದೆ. ಕೂಡಲೇ ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಲಾಯಿತು. ಸ್ಲೀಪಿಂಗ್ ಕೋಚ್ ಬಸ್‌ನಲ್ಲಿ ಬಹಳಷ್ಟು ಪ್ರಯಾಣಿಕರು ಗಾಢನಿದ್ದೆಯಲ್ಲಿದ್ದರು.

ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಅವಘಡವನ್ನು ಗಮನಿಸಿ ಬಸ್‌ನ ಸಿಬ್ಬಂದಿಯನ್ನು ಎಚ್ಚರಿಸಿದರು. ಕೂಡಲೇ ಎಲ್ಲರನ್ನೂ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ಸ್ವಲ್ಪ ತಡವಾಗಿದ್ದರೂ ಭಾರಿ ಅನಾಹುತವಾಗುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ, ಅದಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಅವರವರ ಊರಿಗೆ ಬೇರೆ ಬಸ್‌ಗಳಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago