ಮುಂಬೈ, : ಮಹಾರಾಷ್ಟ್ರದ ಅಲಿಬಾಗ್ನಲ್ಲಿರುವ 100 ಕೋ.ರೂ.ಗೂ ಅಧಿಕ ವೌಲ್ಯದ ಸಮುದ್ರಕ್ಕೆ ಮುಖ ಮಾಡಿರುವ ಬೃಹತ್ ಬಂಗ್ಲೆಯನ್ನು ಸ್ಪೋಟಕ ಇಟ್ಟು ಧ್ವಂಸಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಭಾರತದ ಬ್ಯಾಂಕ್ಗಳಲ್ಲಿ ಸಾಲ ಮರು ಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಕೋಟ್ಯಧಿಪತಿ ನೀರವ್ ಮೋದಿ ಕರಾವಳಿ ನಿಯಂತ್ರಣ ವಲಯ ನಿಯಮಗಳು ಹಾಗೂ ಮಹಾರಾಷ್ಟ್ರದ ರಾಜ್ಯದ ನಿಯಮಾವಳಿಗಳನ್ನು ಉಲ್ಲಂಘಿಸಿ 33,000 ಚದರ ಅಡಿ ಐಷಾರಾಮಿ ಬಂಗ್ಲೆಯನ್ನು ಅನಧಿಕೃತವಾಗಿ ಕಟ್ಟಿದ್ದರು.
ಬಂಗ್ಲೆಯ ಅಡಿಪಾಯ ಗಟ್ಟ್ಟಿಮುಟ್ಟಾಗಿದ್ದ ಕಾರಣ ಬಂಗ್ಲೆ ಒಡೆಯಲು ಬಂದ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಕಟ್ಟಡವನ್ನು ಕೆಡವಿದ್ದಾರೆ. ಬಂಗ್ಲೆ ಕೆಡೆವಲು ಒಂದು ತಿಂಗಳು ಸಮಯ ಹಿಡಿದಿದೆ. ಕಟ್ಟಡ ಧ್ವಂಸ ಕೆಲಸ ಚುರುಕುಗೊಳಿಸಲು ಡೈನಾಮೈಟ್ಗಳಂತಹ ನಿಯಂತ್ರಿತ ಸ್ಫೋಟಕವನ್ನು ಬಳಸಲಾಗಿದೆ. 2009ರಲ್ಲಿ ಶಂಭುರಾಜೆ ಯುವ ಕ್ರಾಂತಿ ಸಂಸ್ಥೆಯೊಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ನೀರವ್ ಮೋದಿ ನಿರ್ಮಿಸಿದ್ದ ಅನಧಿಕೃತ ಬಂಗ್ಲೆಯನ್ನು ಕೆಡವು ಹಾಕಲು ಆದೇಶಿಸಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…