Featured

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ – Vishwanews24

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಆರೋಪಿಗಳಿಗೆ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ

ಉಡುಪಿ: ನೈಜೀರಿಯಾದಿಂದ ಅಕ್ರಮವಾಗಿ ನುಸುಳು ಕೋರರಿಂದ ಎರಡು ಕೆಜಿ ಕೊಕೇನ್ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಅನಧಿಕೃತವಾಗಿ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಬಾರ್ ಮಾಲೀಕ, ಹೆರ್ಗ ನಿವಾಸಿಯನ್ನು ಎನ್.ಸಿ.ಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ವ್ಯಕ್ತಿ ಶೀಲ್ ಮೀರಾ ರೋಡ್ ಶಾಹಿ ಹೋಟೆಲ್ ಮೇಲಿರುವ ಶೀತಲ್ ಸಾಯಿ ಸೊಸೈಟಿಯಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದ ಆರೋಪಿಗಳಿಗೆ ವಾಸ್ತವ್ಯಕ್ಕೆ ಅಕ್ರಮವಾಗಿ ಮನೆ ನೀಡಿದ್ದ ಆರೋಪದಲ್ಲಿ ಮಣಿಪಾಲದ ಹೋಟೆಲ್ ಉದ್ಯಮಿ ದಿನೇಶ್ ಭಾಸ್ಕರ್ ಶೆಟ್ಟಿ ಅವರನ್ನು ಎನ್‌ಸಿಬಿ ಪೊಲೀಸರು ಬಂಧಿಸಿದ್ದರು.

ಬಾರ್ ಮಾಲೀಕ ತನ್ನ ಬಾರ್‌ಗಳಿಗೆ ಡ್ರಗ್ಸ್ ಗಳನ್ನು ಕೂಡ ಇದೇ ಬಂಧಿತ ವ್ಯಕ್ತಿಗಳಿಂದ ಮಣಿಪಾಲಕ್ಕೆ ತರಿಸಿಕೊಂಡು ಅವ್ಯಾಹತವಾಗಿ ಮಾರಾಟ ಮಾಡಿದ್ದಾಗಿ ಎನ್‌ಸಿಬಿ ತನಿಖೆಯಿಂದ ಹೊರಬಂದಿದೆ.

ಸದ್ಯ ಬಾರ್ ಮಾಲೀಕ ಮುಂಬಯಿಯ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡ್ರಗ್ಸ್ ಪೆಡ್ಲರ್ ಅವರ ಬ್ಯಾಂಕ್ ಖಾತೆಯಲ್ಲಿ ಬಾರ್ ಮಾಲೀಕ ಲಕ್ಷಾಂತರ ರೂ ವಹಿವಾಟು ನಡೆಸಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ದಿನೇಶ್ ಭಾಸ್ಕರ್ ಶೆಟ್ಟಿ ಅವರ ಮನೆಯಲ್ಲಿ ಮಾದಕ ವಸ್ತು ಕಳ್ಳಸಾಗಣೆದಾರರೊಬ್ಬ ಹಲವು ವರ್ಷಗಳಿಂದ ಒಪ್ಪಂದವಿಲ್ಲದೆ ವಾಸವಾಗಿದ್ದರು. ಮಾದಕ ವಸ್ತು ಕಳ್ಳಸಾಗಣೆದಾರರಿಂದ 4 ನಕಲಿ ಪಾಸ್‌ಪೋರ್ಟ್‌ಗಳು ಮತ್ತು ನಕಲಿ ಆಧಾರ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago