ಉಡುಪಿ: ನೈಜೀರಿಯಾದಿಂದ ಅಕ್ರಮವಾಗಿ ನುಸುಳು ಕೋರರಿಂದ ಎರಡು ಕೆಜಿ ಕೊಕೇನ್ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಅನಧಿಕೃತವಾಗಿ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಬಾರ್ ಮಾಲೀಕ, ಹೆರ್ಗ ನಿವಾಸಿಯನ್ನು ಎನ್.ಸಿ.ಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ವ್ಯಕ್ತಿ ಶೀಲ್ ಮೀರಾ ರೋಡ್ ಶಾಹಿ ಹೋಟೆಲ್ ಮೇಲಿರುವ ಶೀತಲ್ ಸಾಯಿ ಸೊಸೈಟಿಯಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದ ಆರೋಪಿಗಳಿಗೆ ವಾಸ್ತವ್ಯಕ್ಕೆ ಅಕ್ರಮವಾಗಿ ಮನೆ ನೀಡಿದ್ದ ಆರೋಪದಲ್ಲಿ ಮಣಿಪಾಲದ ಹೋಟೆಲ್ ಉದ್ಯಮಿ ದಿನೇಶ್ ಭಾಸ್ಕರ್ ಶೆಟ್ಟಿ ಅವರನ್ನು ಎನ್ಸಿಬಿ ಪೊಲೀಸರು ಬಂಧಿಸಿದ್ದರು.
ಬಾರ್ ಮಾಲೀಕ ತನ್ನ ಬಾರ್ಗಳಿಗೆ ಡ್ರಗ್ಸ್ ಗಳನ್ನು ಕೂಡ ಇದೇ ಬಂಧಿತ ವ್ಯಕ್ತಿಗಳಿಂದ ಮಣಿಪಾಲಕ್ಕೆ ತರಿಸಿಕೊಂಡು ಅವ್ಯಾಹತವಾಗಿ ಮಾರಾಟ ಮಾಡಿದ್ದಾಗಿ ಎನ್ಸಿಬಿ ತನಿಖೆಯಿಂದ ಹೊರಬಂದಿದೆ.
ಸದ್ಯ ಬಾರ್ ಮಾಲೀಕ ಮುಂಬಯಿಯ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡ್ರಗ್ಸ್ ಪೆಡ್ಲರ್ ಅವರ ಬ್ಯಾಂಕ್ ಖಾತೆಯಲ್ಲಿ ಬಾರ್ ಮಾಲೀಕ ಲಕ್ಷಾಂತರ ರೂ ವಹಿವಾಟು ನಡೆಸಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ದಿನೇಶ್ ಭಾಸ್ಕರ್ ಶೆಟ್ಟಿ ಅವರ ಮನೆಯಲ್ಲಿ ಮಾದಕ ವಸ್ತು ಕಳ್ಳಸಾಗಣೆದಾರರೊಬ್ಬ ಹಲವು ವರ್ಷಗಳಿಂದ ಒಪ್ಪಂದವಿಲ್ಲದೆ ವಾಸವಾಗಿದ್ದರು. ಮಾದಕ ವಸ್ತು ಕಳ್ಳಸಾಗಣೆದಾರರಿಂದ 4 ನಕಲಿ ಪಾಸ್ಪೋರ್ಟ್ಗಳು ಮತ್ತು ನಕಲಿ ಆಧಾರ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…