Featured

ಮುಂಬೈ ಓಮಿಕ್ರಾನ್ ಭೀತಿ :  ಶಾಲೆಗಳ ಪುನರಾರಂಭ ಮುಂದೂಡಿಕೆ – Vishwanews24

ಮುಂಬೈ ಓಮಿಕ್ರಾನ್ ಭೀತಿ :  ಶಾಲೆಗಳ ಪುನರಾರಂಭ ಮುಂದೂಡಿಕೆ – Vishwanews24

ಮುಂಬೈ: ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಮುಂಬೈನಲ್ಲಿ ಶಾಲೆಗಳ ಪುನರಾರಂಭವನ್ನು ಮುಂದೂಡಲಾಗಿದೆ.

ಮುಂಬೈನಲ್ಲಿ 1 ರಿಂದ 7ನೇ ತರಗತಿಯ ಶಾಲೆಗಳು ನಾಳೆ ಅಂದರೆ ಡಿಸೆಂಬರ್ 1 ಆರಂಭವಾಗಬೇಕಿದ್ದ ಶಾಲೆಗಳನ್ನು ಡಿಸೆಂಬರ್ 15 ರಿಂದ ತೆರೆಯುವುದಾಗಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಂಗಳವಾರ ತಿಳಿಸಿದೆ. ಆದರೆ ಮಹಾರಾಷ್ಟ್ರದ ಕೆಲವು ಶಾಲೆಗಳನ್ನು ನಾಳೆಯಿಂದಲೇ ತೆರೆಯಲಾಗುತ್ತಿದೆ.

ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್‍ನ ಆತಂಕದಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ರಾಜ್ಯ ಸಚಿವ ಸಂಪುಟ ಕಳವಳ ವ್ಯಕ್ತಪಡಿಸಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸೋಮವಾರ ಹೇಳಿದ್ದಾರೆ.

ವಿಶ್ವದಲ್ಲಿ ಹಬ್ಬುತ್ತಿರುವ ಕೋವಿಡ್-19ನ ತಳಿ ಓಮಿಕ್ರಾನ್ ಅನ್ನು ತಡೆಗಟ್ಟುವ ದೃಷ್ಟಿಯಿಂದ 1-7ನೇ ತರಗತಿಯವರೆಗೂ ಶಾಲೆಗಳನ್ನು ಡಿಸೆಂಬರ್ 1ರ ಬದಲಾಗಿ ಡಿಸೆಂಬರ್ 15 ರಿಂದ ಪುನಾರಂಭಿಸಲಾಗುತ್ತದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾಧ್ಯಮಕ್ಕೆ ತಿಳಿಸಿದೆ.

ಭಾರತದಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಇಂದು ಕೋವಿಡ್-19 ರೂಪಾಂತರ ತಳಿ ಓಮಿಕ್ರಾನ್ ಕುರಿತು ರಾಜ್ಯಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago