ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರದ ಗಡಿ ದಾಟಿದರೆ ಮುಂಬೈನಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.
ಮುಂಬೈನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಮುಂಬೈನಲ್ಲಿ ಸೋಮವಾರ 8000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಇದು 2021 ರ ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತೀ ಹೆಚ್ಚು ಪ್ರಕರಣಗಳಾಗಿದೆ. ನಿತ್ಯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಕೂಡಾ ಹೆಚ್ಚು ಕಂಡು ಬರುತ್ತಿದ್ದು ಮಹಾರಾಷ್ಟ್ರದಲ್ಲಿ ಈವರೆಗೂ 500 ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈ ಸಂಖ್ಯೆಯಲ್ಲಿ ಬಹುತೇಕ ಪ್ರಕರಣಗಳು ಮುಂಬೈ ಮೂಲದ್ದಾಗಿದೆ.
ಮುಂಬೈನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈಗಾಗಲೇ 1 ರಿಂದ 9 ಮತ್ತು 11 ನೇ ತರಗತಿಗಳ ಎಲ್ಲಾ ಮಾಧ್ಯಮಗಳ ಶಾಲೆಗಳನ್ನು ಜನವರಿ 31 ರವರೆಗೆ ಮುಚ್ಚಲು ಪಾಲಿಕೆ ನಿರ್ಧರಿಸಿದೆ. ಆನ್ ಲೈನ್ ತರಗತಿಗಳಿಗೆ ಆದ್ಯತೆ ನೀಡಲು ಸೂಚಿಸಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…