Featured

ಮುಂಬೈ : ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ರಾಜ್ಯದಲ್ಲಿ ಮತ್ತೆ ಬಿಗಿ ನಿಯಮ ಜಾರಿಗೆ : ಮಹಾರಾಷ್ಟ್ರ ಡಿಸಿಎಂ  – Vishwanews24

ಮುಂಬೈ : ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ರಾಜ್ಯದಲ್ಲಿ ಮತ್ತೆ ಬಿಗಿ ನಿಯಮ ಜಾರಿಗೆ : ಮಹಾರಾಷ್ಟ್ರ ಡಿಸಿಎಂ  – Vishwanews24

ಮುಂಬೈ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ರಾಜ್ಯದಲ್ಲಿ ಮತ್ತೆ ಬಿಗಿ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. 10 ಸಚಿವರು, 20 ಶಾಸಕರು ಇದುವರೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ 8,067 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾದ ಬಳಿಕ ಡಿಸಿಎಂ ಅಜಿತ್ ಪವಾರ್ ಅವರು ಈ ಎಚ್ಚರಿಕೆ ನೀಡಿದ್ದಾರೆ.

“ನಾವು ಇತ್ತೀಚೆಗೆ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. ಇಲ್ಲಿಯವರೆಗೆ 10 ಕ್ಕೂ ಹೆಚ್ಚು ಸಚಿವರು ಮತ್ತು 20 ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಪ್ರತಿಯೊಬ್ಬರೂ ಹೊಸ ವರ್ಷ, ಜನ್ಮದಿನಗಳು ಮತ್ತು ಇತರ ಸಂದರ್ಭಗಳ ಆಚರಣೆಗಳಲ್ಲಿ ಭಾಗವಾಗಲು ಬಯಸುತ್ತಾರೆ. ಹೊಸ ರೂಪಾಂತರ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ ಎಂದು ನೆನಪಿನಲ್ಲಿಡಿ. ಆದ್ದರಿಂದ ಎಚ್ಚರಿಕೆಯ ಅಗತ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಮನವಿ ಮಾಡಿದ್ದಾರೆ. ಕೆಲವು ರಾಜ್ಯಗಳು ರಾತ್ರಿ ಕರ್ಫ್ಯೂ ಘೋಷಿಸಿವೆ. ಮಹಾರಾಷ್ಟ್ರದಲ್ಲಿ, ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚುತ್ತಿವೆ” ಎಂದು ಅವರು ಪೆರ್ನೆ ಗ್ರಾಮದ ಜಯಸ್ತಂಭ್ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯ ಕುರಿತು ಮಾತನಾಡಿದ ಪವಾರ್, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯ ಮೇಲೆ ರಾಜ್ಯ ಸರ್ಕಾರವು ನಿಗಾ ಇರಿಸುತ್ತಿದೆ ಎಂದು ಹೇಳಿದರು. “ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದರೆ ಕಟ್ಟುನಿಟ್ಟಾದ ನಿರ್ಬಂಧಗಳು ಮಾಡಬೇಕಾಗುತ್ತದೆ. ಕಟ್ಟುನಿಟ್ಟಾದ ನಿರ್ಬಂಧವನ್ನು ತಪ್ಪಿಸಲು ಪ್ರತಿಯೊಬ್ಬರೂ ನಿಯಮಗಳನ್ನು ಅನುಸರಿಸಬೇಕು” ಎಂದು ಡಿಸಿಎಂ ಹೇಳಿದರು.

ಇದನ್ನೂ ಓದಿ :

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

14 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

14 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

14 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

15 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

16 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

16 hours ago