ಮುಂಬೈ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ರಾಜ್ಯದಲ್ಲಿ ಮತ್ತೆ ಬಿಗಿ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. 10 ಸಚಿವರು, 20 ಶಾಸಕರು ಇದುವರೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ 8,067 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾದ ಬಳಿಕ ಡಿಸಿಎಂ ಅಜಿತ್ ಪವಾರ್ ಅವರು ಈ ಎಚ್ಚರಿಕೆ ನೀಡಿದ್ದಾರೆ.
“ನಾವು ಇತ್ತೀಚೆಗೆ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. ಇಲ್ಲಿಯವರೆಗೆ 10 ಕ್ಕೂ ಹೆಚ್ಚು ಸಚಿವರು ಮತ್ತು 20 ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಪ್ರತಿಯೊಬ್ಬರೂ ಹೊಸ ವರ್ಷ, ಜನ್ಮದಿನಗಳು ಮತ್ತು ಇತರ ಸಂದರ್ಭಗಳ ಆಚರಣೆಗಳಲ್ಲಿ ಭಾಗವಾಗಲು ಬಯಸುತ್ತಾರೆ. ಹೊಸ ರೂಪಾಂತರ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ ಎಂದು ನೆನಪಿನಲ್ಲಿಡಿ. ಆದ್ದರಿಂದ ಎಚ್ಚರಿಕೆಯ ಅಗತ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಮನವಿ ಮಾಡಿದ್ದಾರೆ. ಕೆಲವು ರಾಜ್ಯಗಳು ರಾತ್ರಿ ಕರ್ಫ್ಯೂ ಘೋಷಿಸಿವೆ. ಮಹಾರಾಷ್ಟ್ರದಲ್ಲಿ, ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚುತ್ತಿವೆ” ಎಂದು ಅವರು ಪೆರ್ನೆ ಗ್ರಾಮದ ಜಯಸ್ತಂಭ್ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯ ಕುರಿತು ಮಾತನಾಡಿದ ಪವಾರ್, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯ ಮೇಲೆ ರಾಜ್ಯ ಸರ್ಕಾರವು ನಿಗಾ ಇರಿಸುತ್ತಿದೆ ಎಂದು ಹೇಳಿದರು. “ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದರೆ ಕಟ್ಟುನಿಟ್ಟಾದ ನಿರ್ಬಂಧಗಳು ಮಾಡಬೇಕಾಗುತ್ತದೆ. ಕಟ್ಟುನಿಟ್ಟಾದ ನಿರ್ಬಂಧವನ್ನು ತಪ್ಪಿಸಲು ಪ್ರತಿಯೊಬ್ಬರೂ ನಿಯಮಗಳನ್ನು ಅನುಸರಿಸಬೇಕು” ಎಂದು ಡಿಸಿಎಂ ಹೇಳಿದರು.
ಇದನ್ನೂ ಓದಿ :
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…