ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್ಗಳನ್ನು ಟ್ರ್ಯಾಕ್ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…