ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್ಗಳನ್ನು ಟ್ರ್ಯಾಕ್ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…