ಭಾರತದ ಇತಿಹಾಸದ ಅತ್ಯಂತ ಕೆಟ್ಟ ಭಯೋತ್ಪಾದಕ ದಾಳಿ ಎನಿಸಿಕೊಂಡಿದ್ದ ಮುಂಬೈ ದಾಳಿ ಒಟ್ಟು ನಾಲ್ಕು ದಿನಗಳ ಕಾಲ ನಡೆದಿತ್ತು. ನವೆಂಬರ್ 26 ರಿಂದ 29ರವರೆಗೆ ನಡೆದಿದ್ದ ದಾಳಿಯಲ್ಲಿ ಸಾಕಷ್ಟು ಸಾವು ನೋವು ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತದಲ್ಲಿ ಪ್ರಜೆಗಳ ರಕ್ಷಣೆಯ ಬಗ್ಗೆಯೇ ಅನುಮಾನ ಹುಟ್ಟಿಕೊಂಡಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಈ ಕರಾಳ ದಿನವನ್ನು ನೆನಪಿಸಿಕೊಂಡಿದ್ದಾರೆ.
ನಿಮ್ಮ ಪ್ರೀತಿಪಾತ್ರರು ಮತ್ತು ಕುಟುಂಬಗಳ ನೋವನ್ನು ನಾವೂ ಕೂಡ ಹಂಚಿಕೊಳ್ಳುತ್ತೇವೆ. ಕರ್ತವ್ಯದ ಸಾಲಿನಲ್ಲಿ ವೀರಾವೇಶದ ಹೋರಾಟ ನಡೆಸಿಸ ಅತ್ಯುನ್ನತ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿಗೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್ನಲ್ಲಿ ಬರೆದಿದ್ದಾರೆ. “ಇಂದು ಮುಂಬೈ ಮೇಲೆ ನಡೆದ ದಾಳಿಯ ಕರಾಳ ದಿನ. 14 ವರ್ಷಗಳ ಹಿಂದೆ ಭಾರತದ ಸಂವಿಧಾನ ಹಾಗೂ ಜನರ ಹಕ್ಕುಗಳನ್ನು ಆಚರಣೆ ಮಾಡುತ್ತಿದ್ದ ದಿನದಂದು, ಶತ್ರುಗಳು ಮಾನವೀಯತೆಯ ಮೇಲೆ ಘೋರವಾದ ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಮೃತರಾದವರಿಗೆ ನಾನು ಸಂತಾಪ ಸೂಚಿಸುತ್ತೇನೆ’ ಎಂದು ನವದೆಹಲಿಯಲ್ಲಿ ಸಂವಿಧಾನ ದಿನದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟರ್ ಪುಟದಲ್ಲಿ ಎರಡು ನಿಮಿಷಗಳ ವಿಡಿಯೋ ಹಂಚಿಕೊಳ್ಳುವ ಮೂಲಕ ಅ ದಿನವನ್ನು ನೆನಪಿಸಿಕೊಂಡಿದ್ದಾರೆ. ಕಳೆದ ತಿಂಗಳು ತಾಜ್ ಹೋಟೆಲ್ನ ಲಾಬಿಯಲ್ಲಿ ನಡೆದ ವಿಶ್ವ ಸಂಸ್ಥೆಯ ಭದ್ರತಾ ಸಮಿತಿಯ ಕಾರ್ಯಕ್ರಮದಲ್ಲಿ ತಾವು ಆಡಿದ ಮಾತುಗಳನ್ನು ಇದರಲ್ಲಿ ಸೇರಿಸಿದ್ದಾರೆ. 2008ರ ಮುಂಬೈ ದಾಳಿಯ ವೇಳೆ ಭಯೋತ್ಪಾದಕರು ಇದೇ ಹೋಟೆಲ್ಅನ್ನು ಪ್ಮರುಖವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು.
“ಭಯೋತ್ಪಾದನೆ ಮಾನವೀಯತೆಗೆ ಬೆದರಿಕೆ. ಇಂದು, 26/11 ರಂದು, ಆ ದಾಳಿಯಲ್ಲಿ ಸಾವು ಕಂಡವನ್ನು ಭಾರತ ಸ್ಮರಿಸಿಕೊಳ್ಳುತ್ತದೆ. ಈ ದಾಳಿಯ ಯೋಜನೆ ಮತ್ತು ಮೇಲ್ವಿಚಾರಣೆ ನಡೆಸಿದವರನ್ನು ನ್ಯಾಯಾಂಗಕ್ಕೆ ತರಬೇಕು. ಜಗತ್ತಿನಾದ್ಯಂತ ಭಯೋತ್ಪಾದನೆಗೆ ಬಲಿಯಾದ ಪ್ರತಿಯೊಬ್ಬರಿಗೂ ನಾವು ಋಣಿಯಾಗಿದ್ದೇವೆ’ ಎಂದು ಜೈಶಂಕರ್ ಅವರು ವೀಡಿಯೊದೊಂದಿಗೆ ಟ್ವೀಟ್ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, 26/11 ಮುಂಬೈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುತ್ತೇನೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅತ್ಯುನ್ನತ ತ್ಯಾಗ ಮಾಡಿದ ಧೀರ ಭದ್ರತಾ ಸಿಬ್ಬಂದಿಯನ್ನು ಈ ವೇಳೆ ನೆನಪಿಸಿಕೊಳ್ಳುತ್ತೇನೆ. ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಒಟ್ಟಾಗ ಹೋರಾಡಬೇಕು ಅನ್ನೋದನ್ನು ಈ ದಿನ ನಮಗೆ ಸಂದೇಶ ನೀಡುತ್ತದೆ’ ಎಂದಿದ್ದಾರೆ.
ಇನ್ನು ದೇಶದ ಜನ ಸೋಶಿಯಲ್ ಮೀಡಿಯಾದಲ್ಲಿ ‘ನೆವರ್ ಫಾರ್ಗಟನ್, ವಿಲ್ ನೆವರ್ ಫಾರ್ಗೆಟ್’ ಎಂದು ಮುಂಬೈ ದಾಳಿಯನ್ನು, ದಾಳಿಯಲ್ಲಿ ಮೃತರಾದ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಂಡಿದ್ದಾರೆ. ಅದರೊಂದಿಗೆ ಈ ದಾಳಿಯಲ್ಲಿ ಮಡಿದ ಎನ್ಎಸ್ಜಿ ಕಮಾಂಡೋ ಕರ್ನಾಟಕದ ಸಂದೀಪ್ ಉನ್ನಿಕೃಷ್ಣನ್ ಅವರನ್ನು ಕನ್ನಡಿಗರು ನೆನಪಿಸಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…