ಇಸ್ಲಾಮಾಬಾದ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಎ ತೊಯ್ಬಾದ ಕಮಾಂಡರ್ ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದನೆ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಶನಿವಾರ(ಜನವರಿ 02) ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.
ಪಂಜಾಬ್ ಪ್ರಾಂತ್ಯದ ಭಯೋತ್ಪಾದನಾ ನಿಗ್ರಹ ದಳ(ಸಿಟಿಡಿ) ಲಖ್ವಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ. ಭಾರತದ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಲಖ್ವಿ ಕಾರ್ಯಾಚರಿಸುತ್ತಿದ್ದಾನೆಂದು ಶಂಕಿಸಲಾಗಿದ್ದು, ಈತ ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
ಸಿಟಿಡಿ ವಕ್ತಾರರ ಪ್ರಕಾರ, ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ಮುಂದುರಿಸಿದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 2008ರಲ್ಲಿ ಲಖ್ವಿಯನ್ನು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.
2008ರಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಹತ್ತು ಮಂದಿ ಶಸ್ತ್ರಸಜ್ಜಿತ ಉಗ್ರರು ಮುಂಬೈನಲ್ಲಿ ನಡೆಸಿದ್ದ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…