ಇಸ್ಲಾಮಾಬಾದ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಎ ತೊಯ್ಬಾದ ಕಮಾಂಡರ್ ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದನೆ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಶನಿವಾರ(ಜನವರಿ 02) ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.
ಪಂಜಾಬ್ ಪ್ರಾಂತ್ಯದ ಭಯೋತ್ಪಾದನಾ ನಿಗ್ರಹ ದಳ(ಸಿಟಿಡಿ) ಲಖ್ವಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ. ಭಾರತದ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಲಖ್ವಿ ಕಾರ್ಯಾಚರಿಸುತ್ತಿದ್ದಾನೆಂದು ಶಂಕಿಸಲಾಗಿದ್ದು, ಈತ ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
ಸಿಟಿಡಿ ವಕ್ತಾರರ ಪ್ರಕಾರ, ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ಮುಂದುರಿಸಿದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 2008ರಲ್ಲಿ ಲಖ್ವಿಯನ್ನು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.
2008ರಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಹತ್ತು ಮಂದಿ ಶಸ್ತ್ರಸಜ್ಜಿತ ಉಗ್ರರು ಮುಂಬೈನಲ್ಲಿ ನಡೆಸಿದ್ದ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…