ಮುಂಬೈ : ಗೇಟ್ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
‘ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ.
ನಾಲ್ಕು ನೌಕಾಪಡೆಯ ಹೆಲಿಕಾಪ್ಟರ್ಗಳು ಮತ್ತು 15 ರಕ್ಷಣಾ ನೌಕೆಗಳನ್ನು ಶೋಧ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲು ನಿಯೋಜಿಸಲಾಗಿದೆ. ರಾತ್ರಿ 9 ಗಂಟೆಯ ವೇಳೆಗೆ, ಮೂವರು ನೌಕಾಪಡೆ ಸಿಬ್ಬಂದಿ ಮತ್ತು 10 ನಾಗರಿಕರು ಸೇರಿದಂತೆ 13 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಯ ಬಗ್ಗೆ ರಾಜ್ಯ ವಿಧಾನಸಭೆಗೆ ವಿವರಿಸಿದ್ದಾರೆ. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಪಿಡಬ್ಲ್ಯುಪಿ ಮುಖಂಡ ಜಯಂತ್ ಪಿ.ಪಾಟೀಲ್ ಟೀಕಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೊಣೆಗಾರಿಕೆ ಮತ್ತು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…