ಮುಂಬೈ: ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.
ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದೊಂದು ನಾಲ್ಕು ಮಹಡಿಯ ವಸತಿ ಕಟ್ಟಡವಾಗಿದ್ದು, ದುರ್ಘಟನೆ ನಡೆದ ಸಂದರ್ಭದಲ್ಲಿ ಮಕ್ಕಳು ಸೇರಿದಂತೆ ಹಲವು ಮಂದಿ ಇಲ್ಲಿದ್ದರು. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಒಳಗೆ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲಾಗಿದೆ.
ಇದರ ಬಳಿಯಿರುವ ಇನ್ನೂ ಮೂರು ಕಟ್ಟಡಗಳು ಆತಂಕದ ಪರಿಸ್ಥಿತಿಯಲ್ಲಿದ್ದು, ಅಲ್ಲಿದ್ದ ಎಲ್ಲರನ್ನೂ ಕೂಡಲೇ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಬೃಹನ್ ಮುಂಬೈ ನಗರಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುರಿದ ಭಾರಿ ಮಳೆಯ ಕಾರಣದಿಂದ ಈ ಬಹುಮಹಡಿ ಕಟ್ಟಡ ಕುಸಿದಿದೆ ಎಂದು ಮಹಾರಾಷ್ಟ್ರದ ಸಚಿವ ಅಸ್ಲಾಂ ಶೇಖ್ ಹೇಳಿದ್ದಾರೆ. ಮುಂಬೈನಲ್ಲಿ ಬುಧವಾರ ಧಾರಾಕಾರ ಮಳೆಯಾಗಿತ್ತು. ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಇದರಿಂದ ರಸ್ತೆ ಮತ್ತು ರೈಲು ಸಂಚಾರಕ್ಕೂ ಅಡಚಣೆಯಾಗಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…