ದುರಾನಿ ತನ್ನ ಹಣ ಹಾಗೂ 4 ಲಕ್ಷ ಬೆಲೆಯ ಚಿನ್ನಾಭರಣವನ್ನು ಲಪಟಾಯಿಸಿದ್ದಾನೆ ಎಂದು ನಟಿ ರಾಖಿ ನೀಡಿರುವ ದೂರಿನ ಮೇರೆಗೆ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿ ದುರಾನಿಯನ್ನು ಬಂಧಿಸಿದ್ದಾರೆ.
ಓಶಿವಾರ ಪೊಲೀಸರು ಆದಿಲ್ ದುರಾನಿ ವಿರುದ್ಧ ಐಪಿಸಿ ಸೆಕ್ಷನ್ 406 ಹಾಗೂ 420 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ನಂತರ, ಪೊಲೀಸರು ಎಫ್ಐಆರ್ನಲ್ಲಿ ಐಪಿಸಿ ಸೆಕ್ಷನ್ 498 (ಎ) ಮತ್ತು 377 ಅನ್ನು ಕೂಡ ಸೇರಿಸಿದ್ದಾರೆ. ಆದಿಲ್ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಆದಿಲ್ ತನ್ನ ಮೇಲೆ ಹಲ್ಲೆ ನಡೆಸಿ ತನ್ನ ಫ್ಲಾಟ್ ನಲ್ಲಿದ್ದ ಹಣ ಹಾಗೂ ಆಭರಣಗಳನ್ನು ತನಗೆ ತಿಳಿಯದಂತೆ ದೋಚಿದ್ದಾನೆ ಎಂದು ರಾಖಿ ಆರೋಪಿಸಿದ್ದಾರೆ.
ಮುಂಬೈನ ಓಶಿವಾರಾ ಪೊಲೀಸ್ ಠಾಣೆಯ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಖಿ, “ಅವನು (ಆದಿಲ್) ನನಗೆ ಹೊಡೆಯುವ ಉದ್ದೇಶದಿಂದ ಬೆಳಗ್ಗೆ ನನ್ನ ಮನೆಗೆ ಬಂದಿದ್ದ. ನಾನು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದೇನೆ,. ಆತ ಆಗಾಗ್ಗೆ ನನ್ನ ಮನೆಗೆ ಭೇಟಿ ನೀಡುತ್ತಾನೆ ಮತ್ತು ಬೆದರಿಕೆ ಹಾಕುತ್ತಾನೆ. ಇಂದೂ ಕೂಡ ನನ್ನನ್ನು ಹೊಡೆಯಲು ಆತ ಬಂದಿದ್ದಾನೆ. ಮನೆಯಲ್ಲಿ, ನಾನು ಭಯಭೀತಳಾಗಿದ್ದೇನೆ ಎಂದು ಹೇಳಿದರು.
ತಾನು ಆದಿಲ್ ನನ್ನು 2022 ರಲ್ಲಿ ವಿವಾಹವಾಗಿದ್ದೇನೆ ಎಂದು ರಾಖಿ ಕಳೆದ ತಿಂಗಳು ಬಹಿರಂಗಪಡಿಸಿದ್ದರು. Instagram ತಮ್ಮ ಮದುವೆ ಪ್ರಮಾಣಪತ್ರದ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಮಾಣಪತ್ರದಲ್ಲಿ ಮದುವೆಯು ಮೇ 29, 2022 ರಂದು ನಡೆದಿದೆ ಎಂದು ತೋರಿಸುತ್ತಿದೆ.
ಆದಿಲ್ ವಿವಾಹೇತರ ಸಂಬಂಧ ಹೊಂದಿರುವುದಾಗಿಯೂ ರಾಖಿ ಆರೋಪಿಸಿದ್ದಾರೆ.
ಆದಿಲ್ ತನಗೆ ಮೋಸ ಮಾಡಿದ ಕಾರಣ ಆತನಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತೇನೆ ಎಂದು ನಟಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…