ದುರಾನಿ ತನ್ನ ಹಣ ಹಾಗೂ 4 ಲಕ್ಷ ಬೆಲೆಯ ಚಿನ್ನಾಭರಣವನ್ನು ಲಪಟಾಯಿಸಿದ್ದಾನೆ ಎಂದು ನಟಿ ರಾಖಿ ನೀಡಿರುವ ದೂರಿನ ಮೇರೆಗೆ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿ ದುರಾನಿಯನ್ನು ಬಂಧಿಸಿದ್ದಾರೆ.
ಓಶಿವಾರ ಪೊಲೀಸರು ಆದಿಲ್ ದುರಾನಿ ವಿರುದ್ಧ ಐಪಿಸಿ ಸೆಕ್ಷನ್ 406 ಹಾಗೂ 420 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ನಂತರ, ಪೊಲೀಸರು ಎಫ್ಐಆರ್ನಲ್ಲಿ ಐಪಿಸಿ ಸೆಕ್ಷನ್ 498 (ಎ) ಮತ್ತು 377 ಅನ್ನು ಕೂಡ ಸೇರಿಸಿದ್ದಾರೆ. ಆದಿಲ್ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಆದಿಲ್ ತನ್ನ ಮೇಲೆ ಹಲ್ಲೆ ನಡೆಸಿ ತನ್ನ ಫ್ಲಾಟ್ ನಲ್ಲಿದ್ದ ಹಣ ಹಾಗೂ ಆಭರಣಗಳನ್ನು ತನಗೆ ತಿಳಿಯದಂತೆ ದೋಚಿದ್ದಾನೆ ಎಂದು ರಾಖಿ ಆರೋಪಿಸಿದ್ದಾರೆ.
ಮುಂಬೈನ ಓಶಿವಾರಾ ಪೊಲೀಸ್ ಠಾಣೆಯ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಖಿ, “ಅವನು (ಆದಿಲ್) ನನಗೆ ಹೊಡೆಯುವ ಉದ್ದೇಶದಿಂದ ಬೆಳಗ್ಗೆ ನನ್ನ ಮನೆಗೆ ಬಂದಿದ್ದ. ನಾನು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದೇನೆ,. ಆತ ಆಗಾಗ್ಗೆ ನನ್ನ ಮನೆಗೆ ಭೇಟಿ ನೀಡುತ್ತಾನೆ ಮತ್ತು ಬೆದರಿಕೆ ಹಾಕುತ್ತಾನೆ. ಇಂದೂ ಕೂಡ ನನ್ನನ್ನು ಹೊಡೆಯಲು ಆತ ಬಂದಿದ್ದಾನೆ. ಮನೆಯಲ್ಲಿ, ನಾನು ಭಯಭೀತಳಾಗಿದ್ದೇನೆ ಎಂದು ಹೇಳಿದರು.
ತಾನು ಆದಿಲ್ ನನ್ನು 2022 ರಲ್ಲಿ ವಿವಾಹವಾಗಿದ್ದೇನೆ ಎಂದು ರಾಖಿ ಕಳೆದ ತಿಂಗಳು ಬಹಿರಂಗಪಡಿಸಿದ್ದರು. Instagram ತಮ್ಮ ಮದುವೆ ಪ್ರಮಾಣಪತ್ರದ ಫೋಟೋವನ್ನು ಹಂಚಿಕೊಂಡಿದ್ದಾರೆ. ಪ್ರಮಾಣಪತ್ರದಲ್ಲಿ ಮದುವೆಯು ಮೇ 29, 2022 ರಂದು ನಡೆದಿದೆ ಎಂದು ತೋರಿಸುತ್ತಿದೆ.
ಆದಿಲ್ ವಿವಾಹೇತರ ಸಂಬಂಧ ಹೊಂದಿರುವುದಾಗಿಯೂ ರಾಖಿ ಆರೋಪಿಸಿದ್ದಾರೆ.
ಆದಿಲ್ ತನಗೆ ಮೋಸ ಮಾಡಿದ ಕಾರಣ ಆತನಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತೇನೆ ಎಂದು ನಟಿ ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…