Featured

ಮುಂಬೈ : ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳ ಅಡಿಯಲ್ಲಿ 40 ಕ್ಕೂ ಹೆಚ್ಚು ಜನ ಸಿಲುಕಿರುವ ಸಾಧ್ಯತೆ -Vishwanews24

ಮುಂಬೈ: ಡೋಂಗ್ರಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 12 ಜನರು ಮೃತಪಟ್ಟಿದ್ದು ಸುಮಾರು 40 ಕ್ಕೂ ಹೆಚ್ಚು ಜನರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.

ಈ ಅವಘಡ ಇಂದು ಬೆಳಗ್ಗೆ 11.40 ಗಂಟೆಯಷ್ಟರಲ್ಲಿ ನಡೆದಿದ್ದು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಾಲ್ಕು ಅಂತಸ್ತಿನ ಕೇಸರ್​ಬಾಯ್​ ಕಟ್ಟಡ ಕುಸಿದು ತಂದೇಲ್​ ರಸ್ತೆಯ ಮೇಲೆ ಬಿದ್ದಿದ್ದಾಗಿ ಬೃಹನ್​​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ (ಬಿಎಂಸಿ) ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.

ಇಲ್ಲಿ ಕಿರಿದಾದ ರಸ್ತೆಗಳ ಮೇಲೆ ಹಲವು ಶಿಥಿಲಗೊಂಡ ಕಟ್ಟಡಗಳು ಇವೆ. ಕಳೆದ ವಾರಗಳಲ್ಲಿ ಸುರಿದ ಮಳೆಯಿಂದಾಗಿ ಈ ಪ್ರದೇಶಗಳೆಲ್ಲ ಜಲಾವೃತಗೊಂಡಿತ್ತು.

ಸ್ಥಳಕ್ಕೆ ಆಂಬುಲೆನ್ಸ್​ಗಳು, ಟ್ರಕ್​ಗಳು ಬಂದಿವೆ. ಆದರೆ, ರಸ್ತೆಗಳು ತೀರ ಕಿರಿದಾಗಿರುವುದರಿಂದ ಕುಸಿದುಬಿದ್ದ ಕಟ್ಟಡದತ್ತ ತೆರಳಲು ಸಾಧ್ಯವಾಗುತ್ತಿಲ್ಲ. ಜೆಸಿಬಿಗಳು ಅಲ್ಲಿ ಹೋಗಲು ಸಾಧ್ಯವಿಲ್ಲ. ಕೆಳಗೆ ಕಟ್ಟಡದ ನಿವಾಸಿಗಳು ಸಿಲುಕಿರುವುದರಿಂದ ಎನ್​ಡಿಆರ್​ಎಫ್​ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೈಯಿಂದಲೇ ಮಣ್ಣು, ಸಿಮೆಂಟ್ ಬ್ಲಾಕ್​ಗಳನ್ನು ತೆರವುಗೊಳಿಸಬೇಕಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago