Featured

ಮುಂಬೈ : ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳ ಅಡಿಯಲ್ಲಿ 40 ಕ್ಕೂ ಹೆಚ್ಚು ಜನ ಸಿಲುಕಿರುವ ಸಾಧ್ಯತೆ -Vishwanews24

ಮುಂಬೈ: ಡೋಂಗ್ರಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 12 ಜನರು ಮೃತಪಟ್ಟಿದ್ದು ಸುಮಾರು 40 ಕ್ಕೂ ಹೆಚ್ಚು ಜನರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.

ಈ ಅವಘಡ ಇಂದು ಬೆಳಗ್ಗೆ 11.40 ಗಂಟೆಯಷ್ಟರಲ್ಲಿ ನಡೆದಿದ್ದು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಾಲ್ಕು ಅಂತಸ್ತಿನ ಕೇಸರ್​ಬಾಯ್​ ಕಟ್ಟಡ ಕುಸಿದು ತಂದೇಲ್​ ರಸ್ತೆಯ ಮೇಲೆ ಬಿದ್ದಿದ್ದಾಗಿ ಬೃಹನ್​​ ಮುಂಬೈ ಮುನ್ಸಿಪಲ್ ಕಾರ್ಪೊರೇಷನ (ಬಿಎಂಸಿ) ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.

ಇಲ್ಲಿ ಕಿರಿದಾದ ರಸ್ತೆಗಳ ಮೇಲೆ ಹಲವು ಶಿಥಿಲಗೊಂಡ ಕಟ್ಟಡಗಳು ಇವೆ. ಕಳೆದ ವಾರಗಳಲ್ಲಿ ಸುರಿದ ಮಳೆಯಿಂದಾಗಿ ಈ ಪ್ರದೇಶಗಳೆಲ್ಲ ಜಲಾವೃತಗೊಂಡಿತ್ತು.

ಸ್ಥಳಕ್ಕೆ ಆಂಬುಲೆನ್ಸ್​ಗಳು, ಟ್ರಕ್​ಗಳು ಬಂದಿವೆ. ಆದರೆ, ರಸ್ತೆಗಳು ತೀರ ಕಿರಿದಾಗಿರುವುದರಿಂದ ಕುಸಿದುಬಿದ್ದ ಕಟ್ಟಡದತ್ತ ತೆರಳಲು ಸಾಧ್ಯವಾಗುತ್ತಿಲ್ಲ. ಜೆಸಿಬಿಗಳು ಅಲ್ಲಿ ಹೋಗಲು ಸಾಧ್ಯವಿಲ್ಲ. ಕೆಳಗೆ ಕಟ್ಟಡದ ನಿವಾಸಿಗಳು ಸಿಲುಕಿರುವುದರಿಂದ ಎನ್​ಡಿಆರ್​ಎಫ್​ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೈಯಿಂದಲೇ ಮಣ್ಣು, ಸಿಮೆಂಟ್ ಬ್ಲಾಕ್​ಗಳನ್ನು ತೆರವುಗೊಳಿಸಬೇಕಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago