Featured

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ – vishwanews24

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ

ಮುಳುಗಿದ ರೈಲ್ವೆ ಹಳಿಗಳು; ವಿಮಾನ ಹಾರಾಟಕ್ಕೂ ತೊಂದರೆ , ಜನಜೀವನ ಅಸ್ತವ್ಯಸ್ತ

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ 54 ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 72 ಮಿ.ಮೀ. ಮತ್ತು 65 ಮಿ.ಮೀ. ಮಳೆಯಾಗಿದೆ. ಹಾಗಾಗಿ ಮುಂಬೈ ಮಹಾನಗರ ಪಾಲಿಕೆಯು, ಅನಗತ್ಯ ಓಡಾಟ ನಿಲ್ಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮೀನುಗಾರರು ಕಡಲಿಗಿಳಿಯದಂತೆ ಸೂಚಿಸಿದೆ.

ವಿಮಾನ ಹಾರಟಕ್ಕೂ ತೊಂದರೆ
ಮಳೆಯಿಂದಾಗಿ ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಮಾಡುವ ಮುನ್ನ 9 ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನ ಸೂರತ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ರೆಡ್‌ ಅಲರ್ಟ್‌ ಘೋಷಣೆ
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕೆಲವು ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.

ರೈಲು ಸಂಚಾರದಲ್ಲಿ ವಿಳಂಬ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ರೈಲ್ವೆಯ ಉಪನಗರ ರೈಲು ಸಂಚಾರದಲ್ಲೂ ಸಮಸ್ಯೆ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿವೆ. ಕುರ್ಲ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಚಾರ್ಜಿಂಗ್‌ ಪಾಯಿಂಟ್‌ಗಳೇ ಗೋಚರಿಸದಂತಾಗಿದೆ. ಹೀಗಾಗಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

16 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

17 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

19 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

19 hours ago