Featured

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ – vishwanews24

ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್‌ ಅಲರ್ಟ್‌ ಘೋಷಣೆ

ಮುಳುಗಿದ ರೈಲ್ವೆ ಹಳಿಗಳು; ವಿಮಾನ ಹಾರಾಟಕ್ಕೂ ತೊಂದರೆ , ಜನಜೀವನ ಅಸ್ತವ್ಯಸ್ತ

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ 54 ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಇನ್ನೂ ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 72 ಮಿ.ಮೀ. ಮತ್ತು 65 ಮಿ.ಮೀ. ಮಳೆಯಾಗಿದೆ. ಹಾಗಾಗಿ ಮುಂಬೈ ಮಹಾನಗರ ಪಾಲಿಕೆಯು, ಅನಗತ್ಯ ಓಡಾಟ ನಿಲ್ಲಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮೀನುಗಾರರು ಕಡಲಿಗಿಳಿಯದಂತೆ ಸೂಚಿಸಿದೆ.

ವಿಮಾನ ಹಾರಟಕ್ಕೂ ತೊಂದರೆ
ಮಳೆಯಿಂದಾಗಿ ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಮಾಡುವ ಮುನ್ನ 9 ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನ ಸೂರತ್‌ಗೆ ಮಾರ್ಗ ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ರೆಡ್‌ ಅಲರ್ಟ್‌ ಘೋಷಣೆ
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕೆಲವು ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.

ರೈಲು ಸಂಚಾರದಲ್ಲಿ ವಿಳಂಬ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ರೈಲ್ವೆಯ ಉಪನಗರ ರೈಲು ಸಂಚಾರದಲ್ಲೂ ಸಮಸ್ಯೆ ಎದುರಾಗಿದೆ. ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿವೆ. ಕುರ್ಲ ಮತ್ತು ತಿಲಕ್ ನಗರ ನಿಲ್ದಾಣಗಳ ನಡುವೆ ಚಾರ್ಜಿಂಗ್‌ ಪಾಯಿಂಟ್‌ಗಳೇ ಗೋಚರಿಸದಂತಾಗಿದೆ. ಹೀಗಾಗಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago