Featured

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ – Vishwanews24

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಮುಂಬೈ : ಬಾಲಿವುಡ್ ನ ಖ್ಯಾತ ಹಿರಿಯ ನಟ ನಿರ್ದೇಶಕನ ಸತೀಸ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಹರಿಯಾಣದ ಮಹೇಂದ್ರಗಢದಲ್ಲಿ 1956ರ ಏಪ್ರಿಲ್ 13ರಂದು ಸತೀಶ್ ಕೌಶಿಕ್ ಜನಿಸಿದರು. 1972 ರಲ್ಲಿ ದೆಹಲಿಯ ಕಿರೋರಿ ಮಾಲ್ ಕಾಲೇಜಿನಲ್ಲಿ ಪದವಿ ಪಡೆದರು. ಕೌಶಿಕ್ ನವದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸಿನಿಮಾ ಕೇತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧ್ಯಯನ ನಡೆಸಿದ್ದಾರೆ. ಇವರು ನಿರ್ದೇಶಕ, ರಂಗಭೂಮಿ ನಟ, ಹಾಸ್ಯನಟ, ಚಿತ್ರಕಥೆಗಾರರಾಗಿಯೂ ಹೆಚ್ಚು ಮನ್ನಣೆಯನ್ನು ಗಳಿಸಿದ್ದರು. 1990ರಲ್ಲಿ ತೆರೆ ಕಂಡ ‘ರಾಮ್ ಲಖನ್’ ಮತ್ತು 1997ರಲ್ಲಿ ಬಂದ ‘ಸಾಜನ್ ಚಲೇ ಸಸುರಲ್’ ಚಿತ್ರಗಳಲ್ಲಿನ ಅವರ ಅತ್ಯುತ್ತಮ ಹಾಸ್ಯನಟನೆಗಾಗಿ ಎರಡು ಬಾರಿ ಫಿಲ್ಮ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಿಸ್ಟರ್‌ ಇಂಡಿಯಾ ಚಿತ್ರದಲ್ಲಿ ಅವರ ‘ಕ್ಯಾಲೆಂಡರ್’ ಪಾತ್ರ ಮತ್ತು ‘ದೀವಾನಾ ಮಸ್ತಾನಾ’ದಲ್ಲಿ ‘ಪಪ್ಪು ಪೇಜರ್’ ಪಾತ್ರಗಳಿಂದಲೇ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದರು. ಕೌಶಿಕ್ ಅವರು ಹರಿಯಾಣ ಚಲನಚಿತ್ರ ಪ್ರಚಾರ ಮಂಡಳಿಯ ಅಧ್ಯಕ್ಷರಾಗಿ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸತೀಶ್ ಕೌಶಿಕ್ ಅವರ ನಿಧನಕ್ಕೆ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago