Featured

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ – Vishwanews24

ಮುಂಬೈ : ಬಾಲಿವುಡ್  ಖ್ಯಾತ ಹಿರಿಯ ನಟ , ನಿರ್ದೇಶಕನ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಮುಂಬೈ : ಬಾಲಿವುಡ್ ನ ಖ್ಯಾತ ಹಿರಿಯ ನಟ ನಿರ್ದೇಶಕನ ಸತೀಸ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಹರಿಯಾಣದ ಮಹೇಂದ್ರಗಢದಲ್ಲಿ 1956ರ ಏಪ್ರಿಲ್ 13ರಂದು ಸತೀಶ್ ಕೌಶಿಕ್ ಜನಿಸಿದರು. 1972 ರಲ್ಲಿ ದೆಹಲಿಯ ಕಿರೋರಿ ಮಾಲ್ ಕಾಲೇಜಿನಲ್ಲಿ ಪದವಿ ಪಡೆದರು. ಕೌಶಿಕ್ ನವದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಸಿನಿಮಾ ಕೇತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಧ್ಯಯನ ನಡೆಸಿದ್ದಾರೆ. ಇವರು ನಿರ್ದೇಶಕ, ರಂಗಭೂಮಿ ನಟ, ಹಾಸ್ಯನಟ, ಚಿತ್ರಕಥೆಗಾರರಾಗಿಯೂ ಹೆಚ್ಚು ಮನ್ನಣೆಯನ್ನು ಗಳಿಸಿದ್ದರು. 1990ರಲ್ಲಿ ತೆರೆ ಕಂಡ ‘ರಾಮ್ ಲಖನ್’ ಮತ್ತು 1997ರಲ್ಲಿ ಬಂದ ‘ಸಾಜನ್ ಚಲೇ ಸಸುರಲ್’ ಚಿತ್ರಗಳಲ್ಲಿನ ಅವರ ಅತ್ಯುತ್ತಮ ಹಾಸ್ಯನಟನೆಗಾಗಿ ಎರಡು ಬಾರಿ ಫಿಲ್ಮ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಿಸ್ಟರ್‌ ಇಂಡಿಯಾ ಚಿತ್ರದಲ್ಲಿ ಅವರ ‘ಕ್ಯಾಲೆಂಡರ್’ ಪಾತ್ರ ಮತ್ತು ‘ದೀವಾನಾ ಮಸ್ತಾನಾ’ದಲ್ಲಿ ‘ಪಪ್ಪು ಪೇಜರ್’ ಪಾತ್ರಗಳಿಂದಲೇ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದರು. ಕೌಶಿಕ್ ಅವರು ಹರಿಯಾಣ ಚಲನಚಿತ್ರ ಪ್ರಚಾರ ಮಂಡಳಿಯ ಅಧ್ಯಕ್ಷರಾಗಿ ಮತ್ತು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸತೀಶ್ ಕೌಶಿಕ್ ಅವರ ನಿಧನಕ್ಕೆ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

18 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

19 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

20 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

20 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago