ಮುಂಬೈ: ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನವೊಂದು ರನ್ ವೇಯಲ್ಲೇ ಜಾರಿ ಅವಘಡ ಸಂಭವಿಸಿ ವಿಮಾನ ಎಂಜಿನ್ ಗೆ ಹಾನಿಯಾಗಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಕೇರಳದ ಕೊಚ್ಚಿಯಿಂದ ಹೊರಟಿದ್ದ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಭಾರೀ ಮಳೆಯ ಪರಿಣಾಮ ರನ್ ವೇಯಿಂದ ಜಾರಿದೆ. ಈ ಅವಘಡದಿಂದ ವಿಮಾನದ ಎಂಜಿನ್ ಗೆ ಹಾನಿಯಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಲೀ, ಸಿಬ್ಬಂದಿಗಳಿಗಾಗಲೀ ಯಾವುದೇ ಹಾನಿಯಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು, ಭಾರೀ ಮಳೆಯಿಂದಾಗಿ ಸಂಭವಿಸಿದ ಈ ಅವಘಡದಲ್ಲಿ ಕೇವಲ ವಿಮಾನ ಹಾಗೂ ರನ್ವೇಗೆ ಹಾನಿಯಾಗಿದೆಯೇ ಹೊರತು, ಪ್ರಯಾಣಿಕರಿಗಾಗಲೀ, ಸಿಬ್ಬಂದಿಗಳಿಗಾಗಲೀ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…