Featured

ಮುಂಬೈ ಭೀಕರ ಭಯೋತ್ಪಾದಕ ದಾಳಿ ಇಂದಿಗೆ 10 ವರ್ಷ…

ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ.
2008 ನವೆಂಬರ್ 26 ರಂದು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿದ್ದರು. ಅಂದು ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಭಯದಲ್ಲಿ ನಡುಗಿ ಹೋಗಿದ್ದು, ವಿಶ್ವಾದ್ಯಂತ ಸುದ್ದಿಯಾಗಿತ್ತು. ಈ ಭೀಕರ ಭಯೋತ್ಪಾದಕ ದಾಳಿಗೆ 166 ಮಂದಿ ಬಲಿಯಾಗಿದ್ದರು.
ನ.26 ರಂದು ಪಾಕಿಸ್ತಾನದ 10 ಮಂದಿ ಉಗ್ರರು ಬೋಟ್ ಮೂಲಕ ಭಾರತದತ್ತ ಪ್ರಯಾಣಿಸಿದ್ದರು. ಗುರುತು ಮರೆಸಿಕೊಂಡು ಮುಂಬೈಯನ್ನು ಪ್ರವೇಶಿಸಿದ ಉಗ್ರರು ಮೂರು ದಿನಗಳ ಕಾಲ ಹೋಟೆಲ್, ರೈಲ್ವೆನಿಲ್ದಾಣ, ಆಸ್ಪತ್ರೆ. ಯಹೂದಿ ಸಮುದಾಯ ಕೇಂದ್ರ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿ ನಡೆಸಿ 166 ಜನರ ಸಾವಿಗೆ ಕಾರಣರಾದರು. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಭಯೋತ್ಪಾದಕರ ದಾಳಿಯ ಬಗ್ಗೆ ತಿಳಿಯುತ್ತಿದ್ದಂತೆ ಜನರ ರಕ್ಷಣೆಗೆ ಪೊಲೀಸರು ದೌಡಾಯಿಸಿದ್ದರು. ಆದರೆ ಈ ದಾಳಿಯಲ್ಲಿ ಪೊಲೀಸ್ ಅಧಿಕಾರಿಗಳಾದ ಹೇಮಂತ್ ಕರ್ಕರೆ, ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ ಮತ್ತು ತುಕಾರಾಮ್ ಓಂಬ್ಳೆ ಮತ್ತು ಯೋಧ ಸಂದೀಪ್ ಉನ್ನಿಕೃಷ್ಣನ್ ಉಗ್ರರಿಂದ ಹತರಾಗಿದ್ದರು. ಇನ್ನೂ 10 ಉಗ್ರರಲ್ಲಿ 9 ದಾಳಿಕೋರರನ್ನು ಭದ್ರತಾ ಪಡೆ ಕೊಂದು ಹಾಕಿತ್ತು.ಕಸಬ್ ನನ್ನು 2012ರ ನ.21 ರಂದು ಪುಣೆಯ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
2008ರ ಭಯೋತ್ಪಾದಕರು ನಡೆಸಿದ ದಾಳಿ ಬಳಿಕ ಮುಂಬೈ ತನ್ನ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದೆ. ಭಾರತೀಯ ಸೇನೆ, ಕೋಸ್ಟಲ್ ಗಾರ್ಡ್ ಮತ್ತು ಮರೈನ್ ಪೊಲೀಸ್ ಸೇರಿ ಮೂರು ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ ಹದ್ದಿನಕಣ್ಣಡಲಾಗಿದೆ. ಜೊತೆಗೆ ಮಹಾರಾಷ್ಟ್ರ ಸರ್ಕಾರ ರಾಡಾರ್, ಹೈಪವರ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಸೋನಾರ್ಸ್ ಇರುವ ಆರ್ಟ್ ಹಾರ್ಬರ್ ಡಿಫೆನ್ಸ್ ಸಿಸ್ಟರ್ ಜಾರಿಗೊಳಿಸಿದೆ.
Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago