Featured

ಮುಂಬೈ ಭೀಕರ ಭಯೋತ್ಪಾದಕ ದಾಳಿ ಇಂದಿಗೆ 10 ವರ್ಷ…

ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ.
2008 ನವೆಂಬರ್ 26 ರಂದು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿದ್ದರು. ಅಂದು ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಭಯದಲ್ಲಿ ನಡುಗಿ ಹೋಗಿದ್ದು, ವಿಶ್ವಾದ್ಯಂತ ಸುದ್ದಿಯಾಗಿತ್ತು. ಈ ಭೀಕರ ಭಯೋತ್ಪಾದಕ ದಾಳಿಗೆ 166 ಮಂದಿ ಬಲಿಯಾಗಿದ್ದರು.
ನ.26 ರಂದು ಪಾಕಿಸ್ತಾನದ 10 ಮಂದಿ ಉಗ್ರರು ಬೋಟ್ ಮೂಲಕ ಭಾರತದತ್ತ ಪ್ರಯಾಣಿಸಿದ್ದರು. ಗುರುತು ಮರೆಸಿಕೊಂಡು ಮುಂಬೈಯನ್ನು ಪ್ರವೇಶಿಸಿದ ಉಗ್ರರು ಮೂರು ದಿನಗಳ ಕಾಲ ಹೋಟೆಲ್, ರೈಲ್ವೆನಿಲ್ದಾಣ, ಆಸ್ಪತ್ರೆ. ಯಹೂದಿ ಸಮುದಾಯ ಕೇಂದ್ರ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿ ನಡೆಸಿ 166 ಜನರ ಸಾವಿಗೆ ಕಾರಣರಾದರು. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಭಯೋತ್ಪಾದಕರ ದಾಳಿಯ ಬಗ್ಗೆ ತಿಳಿಯುತ್ತಿದ್ದಂತೆ ಜನರ ರಕ್ಷಣೆಗೆ ಪೊಲೀಸರು ದೌಡಾಯಿಸಿದ್ದರು. ಆದರೆ ಈ ದಾಳಿಯಲ್ಲಿ ಪೊಲೀಸ್ ಅಧಿಕಾರಿಗಳಾದ ಹೇಮಂತ್ ಕರ್ಕರೆ, ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ ಮತ್ತು ತುಕಾರಾಮ್ ಓಂಬ್ಳೆ ಮತ್ತು ಯೋಧ ಸಂದೀಪ್ ಉನ್ನಿಕೃಷ್ಣನ್ ಉಗ್ರರಿಂದ ಹತರಾಗಿದ್ದರು. ಇನ್ನೂ 10 ಉಗ್ರರಲ್ಲಿ 9 ದಾಳಿಕೋರರನ್ನು ಭದ್ರತಾ ಪಡೆ ಕೊಂದು ಹಾಕಿತ್ತು.ಕಸಬ್ ನನ್ನು 2012ರ ನ.21 ರಂದು ಪುಣೆಯ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
2008ರ ಭಯೋತ್ಪಾದಕರು ನಡೆಸಿದ ದಾಳಿ ಬಳಿಕ ಮುಂಬೈ ತನ್ನ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದೆ. ಭಾರತೀಯ ಸೇನೆ, ಕೋಸ್ಟಲ್ ಗಾರ್ಡ್ ಮತ್ತು ಮರೈನ್ ಪೊಲೀಸ್ ಸೇರಿ ಮೂರು ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ ಹದ್ದಿನಕಣ್ಣಡಲಾಗಿದೆ. ಜೊತೆಗೆ ಮಹಾರಾಷ್ಟ್ರ ಸರ್ಕಾರ ರಾಡಾರ್, ಹೈಪವರ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಸೋನಾರ್ಸ್ ಇರುವ ಆರ್ಟ್ ಹಾರ್ಬರ್ ಡಿಫೆನ್ಸ್ ಸಿಸ್ಟರ್ ಜಾರಿಗೊಳಿಸಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago