Featured

ಮುಂಬೈ ಭೀಕರ ಭಯೋತ್ಪಾದಕ ದಾಳಿ ಇಂದಿಗೆ 10 ವರ್ಷ…

ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ.
2008 ನವೆಂಬರ್ 26 ರಂದು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿದ್ದರು. ಅಂದು ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಭಯದಲ್ಲಿ ನಡುಗಿ ಹೋಗಿದ್ದು, ವಿಶ್ವಾದ್ಯಂತ ಸುದ್ದಿಯಾಗಿತ್ತು. ಈ ಭೀಕರ ಭಯೋತ್ಪಾದಕ ದಾಳಿಗೆ 166 ಮಂದಿ ಬಲಿಯಾಗಿದ್ದರು.
ನ.26 ರಂದು ಪಾಕಿಸ್ತಾನದ 10 ಮಂದಿ ಉಗ್ರರು ಬೋಟ್ ಮೂಲಕ ಭಾರತದತ್ತ ಪ್ರಯಾಣಿಸಿದ್ದರು. ಗುರುತು ಮರೆಸಿಕೊಂಡು ಮುಂಬೈಯನ್ನು ಪ್ರವೇಶಿಸಿದ ಉಗ್ರರು ಮೂರು ದಿನಗಳ ಕಾಲ ಹೋಟೆಲ್, ರೈಲ್ವೆನಿಲ್ದಾಣ, ಆಸ್ಪತ್ರೆ. ಯಹೂದಿ ಸಮುದಾಯ ಕೇಂದ್ರ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿ ನಡೆಸಿ 166 ಜನರ ಸಾವಿಗೆ ಕಾರಣರಾದರು. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಭಯೋತ್ಪಾದಕರ ದಾಳಿಯ ಬಗ್ಗೆ ತಿಳಿಯುತ್ತಿದ್ದಂತೆ ಜನರ ರಕ್ಷಣೆಗೆ ಪೊಲೀಸರು ದೌಡಾಯಿಸಿದ್ದರು. ಆದರೆ ಈ ದಾಳಿಯಲ್ಲಿ ಪೊಲೀಸ್ ಅಧಿಕಾರಿಗಳಾದ ಹೇಮಂತ್ ಕರ್ಕರೆ, ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ ಮತ್ತು ತುಕಾರಾಮ್ ಓಂಬ್ಳೆ ಮತ್ತು ಯೋಧ ಸಂದೀಪ್ ಉನ್ನಿಕೃಷ್ಣನ್ ಉಗ್ರರಿಂದ ಹತರಾಗಿದ್ದರು. ಇನ್ನೂ 10 ಉಗ್ರರಲ್ಲಿ 9 ದಾಳಿಕೋರರನ್ನು ಭದ್ರತಾ ಪಡೆ ಕೊಂದು ಹಾಕಿತ್ತು.ಕಸಬ್ ನನ್ನು 2012ರ ನ.21 ರಂದು ಪುಣೆಯ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
2008ರ ಭಯೋತ್ಪಾದಕರು ನಡೆಸಿದ ದಾಳಿ ಬಳಿಕ ಮುಂಬೈ ತನ್ನ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದೆ. ಭಾರತೀಯ ಸೇನೆ, ಕೋಸ್ಟಲ್ ಗಾರ್ಡ್ ಮತ್ತು ಮರೈನ್ ಪೊಲೀಸ್ ಸೇರಿ ಮೂರು ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ ಹದ್ದಿನಕಣ್ಣಡಲಾಗಿದೆ. ಜೊತೆಗೆ ಮಹಾರಾಷ್ಟ್ರ ಸರ್ಕಾರ ರಾಡಾರ್, ಹೈಪವರ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಅಂಡರ್ ವಾಟರ್ ಸೆನ್ಸರ್, ಡ್ರೈವರ್ ಡಿಟೆಕ್ಷನ್ ಸೋನಾರ್ಸ್ ಇರುವ ಆರ್ಟ್ ಹಾರ್ಬರ್ ಡಿಫೆನ್ಸ್ ಸಿಸ್ಟರ್ ಜಾರಿಗೊಳಿಸಿದೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago