Featured

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ  ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರ ಬೆಳಗಿನ ಜಾವ 3:48ರ ಸುಮಾರಿಗೆ ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು, ಅದರ ಅವಶೇಷಗಳು ಎರಡು-ಮೂರು ಮನೆಗಳ ಮೇಲೆ ಬಿದ್ದಿವೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: 

ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಮುಂದುವರಿದಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಡಿಸಿಪಿ ಗಣೇಶ್ ಶಿಂಧೆ ತಿಳಿಸಿದ್ದಾರೆ.

ಇದನ್ನೂ ಓದಿ: 

ಇನ್ನು ಘಟನೆಯಲ್ಲಿ ಗಾಯಗೊಂಡಿರುವ 18 ವರ್ಷದ ಸೋಹೆಲ್ ಅನ್ಸಾರಿ ಮತ್ತು 14 ವರ್ಷದ ಮೊಹಮ್ಮದ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಹೆಲ್‌ಗೆ ತಲೆಗೆ ಗಾಯವಾಗಿದ್ದು, ಮೊಹಮ್ಮದ್‌ಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರ ಸ್ಥಿತಿಯೂ ಸದ್ಯ ಸ್ಥಿರವಾಗಿದೆ

Vishwa News 24

Recent Posts

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…

39 minutes ago

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…

52 minutes ago

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

1 hour ago

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

1 hour ago

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

1 hour ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

2 hours ago