ನವದೆಹಲಿ: ಕೆಲ ವಾರಗಳಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡ ಸಂಜಯ್ ರೌತ್ ಅವರೊಂದಿಗೆ ನಡೆಯುತ್ತಿರುವ ಜಟಾಪಟಿ ಹಿನ್ನೆಲೆಯಲ್ಲಿ, ನಟಿ ಕಂಗನಾ ರಣಾವತ್ ಅವರಿಗೆ ವೈ ಪ್ಲಸ್ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕಂಗನಾ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು. ಸಂಜಯ್ ರೌತ್ ತನ್ನ ಸ್ವಂತ ರಾಜ್ಯ ಹಿಮಾಚಲ ಪ್ರದೇಶದಿಂದ ಮುಂಬೈಗೆ ಮರಳದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು.
ಇದೇ 9ರಂದು ಅವರು ಮುಂಬೈಗೆ ತೆರಳಲಿರುವ ಹಿನ್ನೆಲೆಯಲ್ಲಿ ಕಂಗನಾ ಅವರು ಸುರಕ್ಷತೆಯ ದೃಷ್ಟಿಯಿಂದ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಭದ್ರತೆ ಅಡಿ ಕಂಗನಾ ಅವರಿಗೆ ಒಬ್ಬರು ಅಥವಾ ಇಬ್ಬರು 2 ಕಮಾಂಡೋಗಳು ಭದ್ರತೆ ವಹಿಸಲಿದ್ದಾರೆ, ಜತೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಇದು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಕಂಗನಾ ಅವರಿಗೆ ಭದ್ರತೆ ಒದಗಿಸಲು ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…