ಪಣಜಿ: ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು ಅಂದಾಜು 11,000 ಕೋಟಿ ರೂ. ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು. ವಿಶ್ವದಲ್ಲೇ ಅತ್ಯುತ್ತಮ ಸೇವೆ ಮತ್ತು ದರ್ಜೆಯನ್ನಾಗಿಸಲು ರೈಲ್ವೆ ವಲಯದಲ್ಲಿ 2030ರ ವೇಳೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.
ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಳ್ಳಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ತಾಣವಾದ ಗೋವಾದಲ್ಲಿ ರೈಲು ಸಂಪರ್ಕ ವೃದ್ದಿಸಲು ಒತ್ತು ನೀಡಲಾಗಿದೆ. ಸಾಂಪ್ರದಾಯಿಕ ಹಳೆ ಬೋಗಿಗಳನ್ನು ಅತ್ಯಾಧುನಿಕ ಬೋಗಿಗಳೊಂದಿಗೆ ಬದಲಾಯಿಸುವ ಕಾರ್ಯ ವೇಗದಿಂದ ಸಾಗಿದೆ ಎಂದು ಹೇಳಿದರು.
ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ದೇಶೀಯವಾಗಿಯೇ ವಿಶ್ವದರ್ಜೆಯ ಬೋಗಿಗಳ ಉತ್ಪಾದನೆಯಾಗುತ್ತಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…