ಮುಂಬೈ: ಮಹಾರಾಷ್ಟ್ರದಲ್ಲಿ ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗುತ್ತಿದ್ದಂತೆ ಕೇಸರಿ ಪಕ್ಷದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಉದ್ದವ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಹುದ್ದೆಗೇರುವುದು ಖಚಿತವಾಗಿದೆ.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬುಧವಾರ ರಾತ್ರಿಯಿಂದಲೇ ಬಿಜೆಪಿಯ ಸಂಸದರು, ಶಾಸಕರು ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಿದ್ದು, ಪರಸ್ಪರ ಶುಭಾಶಯ ಕೋರಿದ್ದಾರೆ. ಇಂದು ಮುಂಬೈನಲ್ಲಿ ಸಭೆ ಸೇರುವಂತೆ ಬಿಜೆಪಿಯ ಎಲ್ಲಾ ಶಾಸಕರಿಗೆ ಬಿಜೆಪಿ ಸೂಚಿಸಿದೆ. ಅಲ್ಲದೆ, ಈ ಸಭೆಯಲ್ಲಿ ಫಡ್ನವೀಸ್ ಮತ್ತು ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಅವರು ಮುಂದಿನ ನಡೆಗಳನ್ನು ನಿರ್ಧರಿಸಲಿದ್ದಾರೆಂದು ಬಿಜೆಪಿ ಹೇಳಿರುವ ಕಾರಣ ಇಂದಿನ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ನಡುವೆ ಕಳೆದ ಎರಡು ವರ್ಷಗಳಿಂದ ತಾನು ಸದನಕ್ಕೆ ಮತ್ತೆ ಮರಳುತ್ತೇನೆ ಎಂದು ಹೇಳಿದ ಫಡ್ನವೀಸ್ ಮತ್ತೆ ಮಹಾ ಸಿಎಂ ಆಗಿ ಬರುತ್ತಾರೆ. ಅವರು ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.
ಗುರುವಾರ ರಾತ್ರಿಯೇ ಬಂಡಾಯ ಶಾಸಕರೆಲ್ಲರೂ ಅಸ್ಸಾಂನಿಂದ ಗೋವಾದ ರೆಸಾರ್ಟ್ಗೆ ಬಂದಿದ್ದು, ತಮ್ಮ ಮುಂದಿನ ರಾಜಕೀಯ ಜೀವನದ ಕುರಿತು ಇಲ್ಲಿ ಚರ್ಚಿಸುವ ಸಲುವಾಗಿ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ಠಾಕ್ರೆ ರಾಜೀನಾಮೆಯಿಂದಾಗಿ ಬಂಡಾಯ ಶಾಸಕರಲ್ಲಿ ಕೆಲವರಿಗೆ ಅಸಮಾಧನವೂ ತಲೆದೋರಿದೆ ಎನ್ನಲಾಗುತ್ತಿದೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…