ಮುಂಬೈ: ಮಹಾರಾಷ್ಟ್ರದಲ್ಲಿ ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗುತ್ತಿದ್ದಂತೆ ಕೇಸರಿ ಪಕ್ಷದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಉದ್ದವ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಹುದ್ದೆಗೇರುವುದು ಖಚಿತವಾಗಿದೆ.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬುಧವಾರ ರಾತ್ರಿಯಿಂದಲೇ ಬಿಜೆಪಿಯ ಸಂಸದರು, ಶಾಸಕರು ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಿದ್ದು, ಪರಸ್ಪರ ಶುಭಾಶಯ ಕೋರಿದ್ದಾರೆ. ಇಂದು ಮುಂಬೈನಲ್ಲಿ ಸಭೆ ಸೇರುವಂತೆ ಬಿಜೆಪಿಯ ಎಲ್ಲಾ ಶಾಸಕರಿಗೆ ಬಿಜೆಪಿ ಸೂಚಿಸಿದೆ. ಅಲ್ಲದೆ, ಈ ಸಭೆಯಲ್ಲಿ ಫಡ್ನವೀಸ್ ಮತ್ತು ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಅವರು ಮುಂದಿನ ನಡೆಗಳನ್ನು ನಿರ್ಧರಿಸಲಿದ್ದಾರೆಂದು ಬಿಜೆಪಿ ಹೇಳಿರುವ ಕಾರಣ ಇಂದಿನ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ನಡುವೆ ಕಳೆದ ಎರಡು ವರ್ಷಗಳಿಂದ ತಾನು ಸದನಕ್ಕೆ ಮತ್ತೆ ಮರಳುತ್ತೇನೆ ಎಂದು ಹೇಳಿದ ಫಡ್ನವೀಸ್ ಮತ್ತೆ ಮಹಾ ಸಿಎಂ ಆಗಿ ಬರುತ್ತಾರೆ. ಅವರು ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.
ಗುರುವಾರ ರಾತ್ರಿಯೇ ಬಂಡಾಯ ಶಾಸಕರೆಲ್ಲರೂ ಅಸ್ಸಾಂನಿಂದ ಗೋವಾದ ರೆಸಾರ್ಟ್ಗೆ ಬಂದಿದ್ದು, ತಮ್ಮ ಮುಂದಿನ ರಾಜಕೀಯ ಜೀವನದ ಕುರಿತು ಇಲ್ಲಿ ಚರ್ಚಿಸುವ ಸಲುವಾಗಿ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ಠಾಕ್ರೆ ರಾಜೀನಾಮೆಯಿಂದಾಗಿ ಬಂಡಾಯ ಶಾಸಕರಲ್ಲಿ ಕೆಲವರಿಗೆ ಅಸಮಾಧನವೂ ತಲೆದೋರಿದೆ ಎನ್ನಲಾಗುತ್ತಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…