Featured

ಮುಂಬೈ: ಮತ್ತೆ ಮಹಾ ಸಿಎಂ ಆಗುವತ್ತ ದೇವೇಂದ್ರ ಫಡ್ನವೀಸ್ – ಕೇಸರಿ ಪಕ್ಷದಲ್ಲಿ ಗರಿಗೆದರಿದ ಸಂಭ್ರಮ – Vishwanews24

ಮುಂಬೈ: ಮತ್ತೆ ಮಹಾ ಸಿಎಂ ಆಗುವತ್ತ ದೇವೇಂದ್ರ ಫಡ್ನವೀಸ್ – ಕೇಸರಿ ಪಕ್ಷದಲ್ಲಿ ಗರಿಗೆದರಿದ ಸಂಭ್ರಮ

ಮುಂಬೈ: ಮಹಾರಾಷ್ಟ್ರದಲ್ಲಿ ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗುತ್ತಿದ್ದಂತೆ ಕೇಸರಿ ಪಕ್ಷದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಉದ್ದವ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಹುದ್ದೆಗೇರುವುದು ಖಚಿತವಾಗಿದೆ.

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬುಧವಾರ ರಾತ್ರಿಯಿಂದಲೇ ಬಿಜೆಪಿಯ ಸಂಸದರು, ಶಾಸಕರು ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಿದ್ದು, ಪರಸ್ಪರ ಶುಭಾಶಯ ಕೋರಿದ್ದಾರೆ. ಇಂದು ಮುಂಬೈನಲ್ಲಿ ಸಭೆ ಸೇರುವಂತೆ ಬಿಜೆಪಿಯ ಎಲ್ಲಾ ಶಾಸಕರಿಗೆ ಬಿಜೆಪಿ ಸೂಚಿಸಿದೆ. ಅಲ್ಲದೆ, ಈ ಸಭೆಯಲ್ಲಿ ಫಡ್ನವೀಸ್ ಮತ್ತು ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಅವರು ಮುಂದಿನ ನಡೆಗಳನ್ನು ನಿರ್ಧರಿಸಲಿದ್ದಾರೆಂದು ಬಿಜೆಪಿ ಹೇಳಿರುವ ಕಾರಣ ಇಂದಿನ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ನಡುವೆ ಕಳೆದ ಎರಡು ವರ್ಷಗಳಿಂದ ತಾನು ಸದನಕ್ಕೆ ಮತ್ತೆ ಮರಳುತ್ತೇನೆ ಎಂದು ಹೇಳಿದ ಫಡ್ನವೀಸ್ ಮತ್ತೆ ಮಹಾ ಸಿಎಂ ಆಗಿ ಬರುತ್ತಾರೆ. ಅವರು ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

ಗುರುವಾರ ರಾತ್ರಿಯೇ ಬಂಡಾಯ ಶಾಸಕರೆಲ್ಲರೂ ಅಸ್ಸಾಂನಿಂದ ಗೋವಾದ ರೆಸಾರ್ಟ್‌ಗೆ ಬಂದಿದ್ದು, ತಮ್ಮ ಮುಂದಿನ ರಾಜಕೀಯ ಜೀವನದ ಕುರಿತು ಇಲ್ಲಿ ಚರ್ಚಿಸುವ ಸಲುವಾಗಿ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ಠಾಕ್ರೆ ರಾಜೀನಾಮೆಯಿಂದಾಗಿ ಬಂಡಾಯ ಶಾಸಕರಲ್ಲಿ ಕೆಲವರಿಗೆ ಅಸಮಾಧನವೂ ತಲೆದೋರಿದೆ ಎನ್ನಲಾಗುತ್ತಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

18 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

18 hours ago