ಮುಂಬೈ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಿಎಚ್ಡಿ ವಿದ್ಯಾರ್ಥಿಯೊಬ್ಬ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿನಡೆದಿದೆ. ಇದೀಗ ಇಬ್ಬರಿಗೂ ಸುಟ್ಟ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಬ್ಬರೂ ಪ್ರಾಣಿಶಾಸ್ತ್ರದ (Zoology) ಪಿಎಚ್ಡಿ ವಿದ್ಯಾರ್ಥಿಗಳಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಇದನ್ನೂ ಓದಿ: ಉಡುಪಿ: ಪಿಎಫ್ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ : ತೇಜಸ್ವಿ ಸೂರ್ಯ – Vishwanews24
ಹನುಮಾನ್ ತೆಕಡಿಯಲ್ಲಿರುವ ಸರ್ಕಾರಿ ಫೋರೆನ್ಸಿಕ್ ಕಾಲೇಜಿನ ಬಯೋಫಿಸಿಕ್ಸ್ ವಿಭಾಗದ ಕ್ಯಾಬಿನ್ನಲ್ಲಿ ಯುವತಿ ತನ್ನ ಪ್ರಾಜೆಕ್ಟ್ ಮಾಡುತ್ತಿದ್ದಾಗ ಆರೋಪಿ ಒಳಗೆ ನುಗ್ಗಿದ್ದಾನೆ. ನಂತರ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದೇಕೆ ಎಂದು ಪ್ರಶ್ನಿಸಲು ಆರಂಭಿಸಿದ್ದಾನೆ. ನಂತರ ತನ್ನ ಮೇಲೆ ಹಾಗೂ ಯುವತಿಯ ಮೇಲೆ ಪೆಟ್ರೋಲ್ ಸುರಿದು ಲೈಟರ್ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ನಂತರ ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ ಎಂದು ಬೇಗಂಪುರ ಠಾಣೆಯ ಪಿಐ ಪ್ರಶಾಂತ್ ಪೋತದಾರ ತಿಳಿಸಿದ್ದಾರೆ.
ಇದೀಗ ಇಬ್ಬರನ್ನು ಚಿಕಿತ್ಸೆಗಾಗಿ ಔರಂಗಾಬಾದ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಗೆ 90% ಸುಟ್ಟ ಗಾಯಗಳಾಗಿದ್ದರೆ, ಯುವತಿಗೆ 55% ಸುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307, 326A, 354D, 506,34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಣಿಪಾಲ: ಕರಾವಳಿಯಲ್ಲಿ ಎನ್ಐಎ ಘಟಕ ಆರಂಭಕ್ಕೆ ಸಂಸತ್ ನಲ್ಲಿ ವಿಷಯ ಪ್ರಸ್ತಾಪ: ತೇಜಸ್ವಿ ಸೂರ್ಯ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…