Featured

ಮುಂಬೈ :ರೀಲ್ಸ್​ ಮಾಡುವ ವೇಳೆ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು : ಯುವತಿ ಸಾವು – vishwanews24

ಮುಂಬೈ: ರೀಲ್ಸ್​ ಮಾಡುವಾಗ 300ಅಡಿ ಕಂದಕಕ್ಕೆ ಉರುಳಿದ ಕಾರು; ಯುವತಿ ಮೃತ್ಯು, ವಿಡಿಯೋ ವೈರಲ್​

ಮುಂಬೈ:  ಯುವತಿಯೊಬ್ಬಳು ರೀಲ್ಸ್​ ಮಾಡುವಾಗ 300 ಅಡಿ ಆಳದ ಕಂದಕಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಹನುಮಾನ್​ನಗರದಲ್ಲಿ ನಡೆದಿದ್ದು, ಮೃತರನ್ನು ಶ್ವೇತಾ ದೀಪಕ್​ ಸುರ್ವಾಸೆ (23) ಎಂದು ಗುರುತಿಸಲಾಗಿದೆ. ಇವರು ರೀಲ್ಸ್​ ಮಾಡುವಾಗ ಕಾರನ್ನು ರಿವರ್ಸ್​ ತೆಗೆಯುವಾಗ ಈ ದುರ್ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ರೀಲ್ಸ್​ ಮಾಡುವಾದ ಯುವತಿ ಕಾರನ್ನು ರಿವರ್ಸ್​ ತೆಗೆಯುತ್ತ ರೀಲ್ಸ್​ ಮಾಡಲು ಶುರು ಮಾಡುತ್ತಾರೆ. ಈ ವೇಳೆ ಆಕೆಯ ಗೆಳೆಯ ಕಾರನ್ನು ನಿಧಾನವಾಗಿ ರಿವರ್ಸ್​ ತೆಗೆಯುವಂತೆ ಸೂಚಿಸುತ್ತಾನೆ. ಇದಕ್ಕೆ ಕೇರ್​ ಮಾಡದ ಆಕೆ ವೇಗವಾಗಿ ರಿವರ್ಸ್​ ತೆಗೆಯುತ್ತಾಳೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು 300 ಅಡಿ ಆಳದ ಕಂದಕಕ್ಕೆ ಉರುಳುತ್ತದೆ.

ಕಾರಿ ಕಂದಕಕ್ಕೆ ಉರುಳಿದ ರಭಸಕ್ಕೆ ಜಖಂಗೊಂಡಿದ್ದು, ಕಾರಿನೊಳಗಡೆ ಯುವತಿ ಕಾರು ಬಿದ್ದ ರಭಸಕ್ಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡದ ಸದಸ್ಯರು ಕಂದಕಕ್ಕೆ ಉರುಳಿದ್ದ ಕಾರು ಹಾಗೂ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago