Featured

ಮುಂಬೈ: ಶಿವಸೇನೆ ನಾಯಕರು ನಾಪತ್ತೆಯಾಗಿರುವುದರಲ್ಲಿ ನಮ್ಮ ಪಾತ್ರವಿಲ್ಲ : ಬಿಜೆಪಿ – Vishwanews24

ಮುಂಬೈ: ಶಿವಸೇನೆ ನಾಯಕರು ನಾಪತ್ತೆಯಾಗಿರುವುದರಲ್ಲಿ ನಮ್ಮ ಪಾತ್ರವಿಲ್ಲ : ಬಿಜೆಪಿ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್​ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಬೆಳವಣಿಗೆಯಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಮಾತನಾಡಿ, ಶಿವಸೇನೆ ನಾಯಕರು ನಾಪತ್ತೆಯಾಗಿರುವುದರಲ್ಲಿ ನಮ್ಮ ಪಾತ್ರವಿಲ್ಲ ಆದರೆ, ಏಕನಾಥ್ ಶಿಂಧೆಯವರು ನಮ್ಮನ್ನು ಸಂಪರ್ಕಿಸಿ ಸರ್ಕಾರ ರಚಿಸುವ ಆಫರ್ ನೀಡಿದ್ದೇ ಆದರೆ, ಅದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಹೇಳಿದ್ದಾರೆ.

ಶಾಸಕರು ನಾಪತ್ತೆಯಾಗಿರುವುದು ಶಿವಸೇನೆಯ ಆಂತರಿಕ ವಿಚಾರ. ಪಕ್ಷದ ನಾಯಕರೊಂದಿಗೆ ಶಿಂಧೆ ಸೂರತ್’ಗೆ ಹೋಗಿರುವ ಕುರಿತು ನಮಗೆ ಮಾಹಿತಿ ಇಲ್ಲ. ಇದರಲ್ಲಿ ನಮ್ಮ ಪಾತ್ರವಿಲ್ಲ. ಆದರೆ, ಶಿಂಧೆಯವರಿಂದ ಸರ್ಕಾರ ರಚಿರುವ ಆಫರ್ ಬಂದರೆ, ಅದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಹಿಂದೆ ಕೂಡ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸರ್ಕಾರ ರಚನೆಯಾದರೆ, ಮುಂದೆಯೂ ಉತ್ತಮವಾಗಿ ಕೆಲಸ ಮಾಡುತ್ತೇವೆ. ಅವರೊಂದಿಗೆ ಸರ್ಕಾರ ರಚಿಸಲು ಸಿದ್ಧರಿದ್ದೇವೆ. ರಾವತ್ ರಾಜ್ಯಕ್ಕೆ ಸಾಕಷ್ಟು ಹಾನಿಯುಂಟು ಮಾಡಿದ್ದಾರೆ. ವ್ಯಕ್ತಿಯೊಬ್ಬರ ಪರವಾಗಿ ಈ ರೀತಿ ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ನಾರಾಯಣ್ ರಾಣೆಯವರು ಮಾತನಾಡಿ, ಏಕನಾಥ್ ಶಿಂಧೆಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

13 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

14 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

14 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

15 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

17 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

17 hours ago