ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತರಳುತ್ತಿದ್ದ ಬಸ್ವೊಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೀಡಾಗಿದ್ದು 10 ಮಂದಿ ಸಾವನ್ನಪ್ಪಿದ್ದು 34 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ ಪತ್ತಾರೆ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾರಾಷ್ಟ್ರದಲ್ಲಿ ಶಿರಡಿ ಸಾಯಿಬಾಬಾ ದೇವರ ದರ್ಶನಕ್ಕಾಗಿ ತೆರಳುತ್ತಿದ್ದ ಬಸ್, ಟ್ರಕ್ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಲ್ಲಾಸ ನಗರದಿಂದ ಸಾಯಿಬಾಬಾ ದರ್ಶನಕ್ಕೆ ಹೊರಟಿದ್ದ 15 ಬಸ್ಗಳಲ್ಲಿ ಇದು ಸಹ ಒಂದಾಗಿತ್ತು. ಮೃತ 10 ಮಂದಿಯಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳಿದ್ದಾರೆ. ಇನ್ನೂ ಗಾಯಗೊಂಡಿರುವ 34 ಮಂದಿ ನಾಸಿಕ್ನ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಹೆದ್ದಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…