ಮುಂಬೈ: ಈ ಹಿಂದೆ ಹಿಜಾಬ್ ನಿಷೇಧಿಸಿದ್ದ ಚೆಂಬೂರಿನ ಆಚಾರ್ಯ ಮತ್ತು ಮರಾಠೆ ಕಾಲೇಜು, ಇದೀಗ ಸೋಮವಾರದಿಂದ ವಿದ್ಯಾರ್ಥಿಗಳು ಜೀನ್ಸ್ ಮತ್ತು ಟೀ ಶರ್ಟ್ ಧರಿಸಿ ಕಾಲೇಜಿನ ಆವರಣ ಪ್ರವೇಶಿಸುವುದನ್ನೂ ನಿಷೇಧಿಸಿದೆ.
ಕಳೆದ ವರ್ಷ ವಸ್ತ್ರ ಸಂಹಿತೆ ಜಾರಿಗೊಳಿಸಿದ್ದ ಈ ಕಾಲೇಜು, ವಿದ್ಯಾರ್ಥಿಗಳು ಹಿಜಾಬ್ ಮತ್ತಿತರ ಧಾರ್ಮಿಕ ಗುರುತುಗಳ ವಸ್ತ್ರ ತೊಟ್ಟು ಕಾಲೇಜು ಆವರಣ ಪ್ರವೇಶಿಸುವುದನ್ನು ನಿಷೇಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಾಲೇಜು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಿಗೇ ನೂತನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿರುವ ಆಚಾರ್ಯ ಮತ್ತು ಮರಾಠೆ ಕಾಲೇಜು ಆಡಳಿತ ಮಂಡಳಿ, ಹಿಜಾಬ್ ನಂತರ ವಿದ್ಯಾರ್ಥಿಗಳು ಜೀನ್ಸ್ ಮತ್ತು ಟೀಶರ್ಟ್ ತೊಟ್ಟು ಕಾಲೇಜು ಆವರಣ ಪ್ರವೇಶಿಸುವುದನ್ನೂ ನಿಷೇಧಿಸಿದೆ.
ಜೂನ್ 27ರಂದು ಹೊರಡಿಸಲಾಗಿರುವ “ವಸ್ತ್ರ ಸಂಹಿತೆ ಮತ್ತು ಇತರ ನಿಯಮಗಳು” ಎಂಬ ಶೀರ್ಷಿಕೆಯ ನೋಟಿಸ್ ಪ್ರಕಾರ, ಹರಿದ ಜೀನ್ಸ್, ಟೀಶರ್ಟ್ಗಳು, ಅಸಭ್ಯ ವಸ್ತ್ರಗಳು ಹಾಗೂ ಜೆರ್ಸಿಗಳನ್ನು ತೊಟ್ಟು ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಪ್ರವೇಶಿಸುವಂತಿಲ್ಲ.
ಈ ನೋಟಿಸ್ಗೆ ಕಾಲೇಜಿನ ಪ್ರಾಂಶುಪಾಲೆಯಾದ ಡಾ. ವಿದ್ಯಾಗೌರಿ ಲೆಲೆ ಸಹಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಔಪಚಾರಿಕ ಮತ್ತು ಸಭ್ಯ ಉಡುಪುಗಳನ್ನು ಧರಿಸಬೇಕು. ಅವರು ಅರ್ಧ ತೋಳಿನ ಟೀಶರ್ಟ್, ಪೂರ್ಣ ತೋಳಿನ ಟೀ ಶರ್ಟ್ ಮತ್ತು ಶರ್ಟ್ ಅನ್ನು ಧರಿಸಬಹುದಾಗಿದೆ. ಯುವತಿಯರು ಯಾವುದೇ ಭಾರತೀಯ ಅಥವಾ ಪಾಶ್ಚಿಮಾತ್ಯ ಉಡುಪುಗಳನ್ನು ಧರಿಸಬಹುದಾಗಿದೆ. ಆದರೆ, ಧಾರ್ಮಿಕ ಅಥವಾ ಸಾಂಸ್ಕೃತಿಕ ಅಸಮಾನತೆಯನ್ನು ಸೂಚಿಸುವ ಯಾವುದೇ ಉಡುಪುಗಳನ್ನು ವಿದ್ಯಾರ್ಥಿಗಳು ಧರಿಸಕೂಡದು. ನಕಾಬ್, ಹಿಜಾಬ್, ಬುರ್ಖಾ, ಕುತ್ತಿಗೆ ವಸ್ತ್ರ, ಟೋಪಿ, ಬ್ಯಾಡ್ಜ್ ಇತ್ಯಾದಿಗಳನ್ನು ತೆಗೆದು, ಕಾಲೇಜಿನ ನೆಲ ಅಂತಸ್ತಿನಲ್ಲಿರುವ ಕೊಠಡಿಯಲ್ಲಿ ಇಡಬೇಕು. ನಂತರವಷ್ಟೆ ಕಾಲೇಜಿನ ಆವರಣದ ಸುತ್ತ ತಿರುಗಾಡಲು ಅವಕಾಶ ನೀಡಲಾಗುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.
“ಕಳೆದ ವರ್ಷ ಅವರು ಹಿಜಾಬ್ ಅನ್ನು ನಿಷೇಧಿಸಿದರು. ಈ ವರ್ಷ ಅವರು ಜೀನ್ಸ್ ಮತ್ತು ಟೀಶರ್ಟ್ ಅನ್ನು ನಿಷೇಧಿಸಿದ್ದಾರೆ. ಟೀಶರ್ಟ್ ಮತ್ತು ಜೀನ್ಸ್ ಅನ್ನು ಕೇವಲ ಯುವಕರು ಮಾತ್ರ ಧರಿಸುವುದಿಲ್ಲ. ಬದಲಿಗೆ ಎಲ್ಲ ಧರ್ಮ ಮತ್ತು ಲಿಂಗದ ಜನರು ಧರಿಸುತ್ತಾರೆ. ಅವರು ಇಂತಹ ಅಪ್ರಾಯೋಗಿಕ ವಸ್ತ್ರ ಸಂಹಿತೆಗಳನ್ನು ಜಾರಿಗೊಳಿಸಿ ವಿದ್ಯಾರ್ಥಿಗಳ ಮೇಲೆ ಏನು ಹೇರಲು ಬಯಸುತ್ತಿದ್ದಾರೆಂಬುದೇ ಅರ್ಥವಾಗುತ್ತಿಲ್ಲ” ಎಂದು ಗೋವಂಡಿ ಸಿಟಿಝನ್ಸ್ ಅಸೋಸಿಯೇಷನ್ನ ಅತೀಕ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…